ವೈದ್ಯರು, ಸಂಗ್ರಹ ಚಿತ್ರ 
ದೇಶ

2009ರ ಶೋಪಿಯಾನ್ ಅತ್ಯಾಚಾರ-ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ತಿರುಚಿ, ಪಾಕ್ ಪರ ಕೆಲಸ ಮಾಡಿದ್ದ ಇಬ್ಬರು ವೈದ್ಯರ ವಜಾ!

2009 ರಲ್ಲಿ ಶೋಪಿಯಾನ್ ನಲ್ಲಿ ನಡೆದ ಅತ್ಯಾಚಾರ-ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ತಿರುಚಿದ್ದ,  ಪಾಕ್ ಮೂಲದ ಸಂಘಟನೆಗಳೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ವೈದ್ಯರನ್ನು ಜಮ್ಮು-ಕಾಶ್ಮೀರ ಆಡಳಿತ ಸೇವೆಯಿಂದ ವಜಾಗೊಳಿಸಿದೆ.

ಶ್ರೀನಗರ: 2009 ರಲ್ಲಿ ಶೋಪಿಯಾನ್ ನಲ್ಲಿ ನಡೆದ ಅತ್ಯಾಚಾರ-ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ತಿರುಚಿದ್ದ,  ಪಾಕ್ ಮೂಲದ ಸಂಘಟನೆಗಳೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ವೈದ್ಯರನ್ನು ಜಮ್ಮು-ಕಾಶ್ಮೀರ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
 
2009 ರಲ್ಲಿ ಮೇ.30 ರಂದು ಆಸಿಯಾ ಜಾನ್ ಹಾಗೂ ನೀಲೋಫಾರ್ ಇಬ್ಬರ ಮೃತದೇಹ ತೊರೆಯೊಂದರಲ್ಲಿ ಪತ್ತೆಯಾಗಿತ್ತು. ಇಬ್ಬರನ್ನೂ ಭದ್ರತಾ ಪಡೆಗಳು ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಘಟನೆಯ ಪರಿಣಾಮ 42 ದಿನಗಳು ಪ್ರತಿಭಟನೆಗಳು ನಡೆದಿದ್ದವು.  ಇದಾದ ಬಳಿಕ ಸಿಬಿಐ ತನಿಖೆಯನ್ನು ಕೈಗೆತ್ತಿಕೊಂಡು ಆ ಇಬ್ಬರೂ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿಲ್ಲ, ಹತ್ಯೆಯೂ ಆಗಿಲ್ಲ ಎಂಬ ಅಂಶವನ್ನು ಪತ್ತೆ ಮಾಡಿತ್ತು. 

ಆದರೆ ಇಬ್ಬರು ವೈದ್ಯರಾದ ಡಾ. ಬಿಲಾಲ್ ಅಹ್ಮದ್ ದಲಾಲ್ ಹಾಗೂ ಡಾ. ನಿಘಾತ್ ಶಹೀನ್ ಚಿಲ್ಲೂ ಅವರು ಪಾಕಿಸ್ತಾನದೊಂದಿಗೆ ಸೇರಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಮೇ.29, 2009 ರಂದು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದ ಆಸಿಯಾ ಜಾನ್ ಹಾಗೂ ನೀಲೋಫಾರ್ ಎಂಬ ಮಹಿಳೆಯರ ಮರಣೋತ್ತರ ವರದಿಯನ್ನು ತಪ್ಪಾಗಿ ನೀಡಿದ್ದರು ಅಷ್ಟೇ ಅಲ್ಲದೇ ಪಾಕ್ ಜೊತೆಗೆ ಸೇರಿ ಕಾಶ್ಮೀರದಲ್ಲಿ ಪಿತೂರಿ ನಡೆಸಿದ್ದರು ಇದಕ್ಕಾಗಿ ವೈದ್ಯರನ್ನು ವಜಾಗೊಳಿಸಲಾಗಿದೆ ಎಂದು ಜಮ್ಮು-ಕಾಶ್ಮೀರದ ಅಧಿಕಾರಿಗಳು ಹೇಳಿದ್ದಾರೆ.

ಭದ್ರತಾ ಪಡೆಗಳ ವಿರುದ್ಧ ಸುಳ್ಳು ಅತ್ಯಾಚಾರ ಹಾಗೂ ಹತ್ಯೆ ಆರೋಪ ಹೊರಿಸುವ ಮೂಲಕ ಜಮ್ಮು-ಕಾಶ್ಮೀರದದ ವಿರುದ್ಧ ಅಸಮಾಧಾನವನ್ನು ಸೃಷ್ಟಿಸುವುದು ವೈದ್ಯರ ಅಂತಿಮ ಉದ್ದೇಶವಾಗಿತ್ತು ಉದ್ದೇಶವಾಗಿತ್ತು ಎಂಬ ಮಾಹಿತಿಯನ್ನು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT