ಟಿಸಿಎಸ್ 
ದೇಶ

ಕೆಲಸಕ್ಕಾಗಿ ಲಂಚ ಪಡೆದ ಪ್ರಕರಣ: ಟಿಸಿಎಸ್ 4 ಸಿಬ್ಬಂದಿಗಳು ವಜಾ

ಸರ್ಕಾರಿ ಅಧಿಕಾರಿಗಳು ಲಂಚ ಪಡೆದ ಪ್ರಕರಣಗಳು ಸಾಮಾನ್ಯ.. ಆದರೆ ಪ್ರಖ್ಯಾತ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ (TCS) ನಲ್ಲೂ ಲಂಚಾವತಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಮುಂಬೈ: ಸರ್ಕಾರಿ ಅಧಿಕಾರಿಗಳು ಲಂಚ ಪಡೆದ ಪ್ರಕರಣಗಳು ಸಾಮಾನ್ಯ.. ಆದರೆ ಪ್ರಖ್ಯಾತ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ (TCS) ನಲ್ಲೂ ಲಂಚಾವತಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಹೌದು.. ಭಾರತದ ಅತೀದೊಡ್ಡ ಟೆಕ್​​ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ನಲ್ಲಿ ಬಹುಕೋಟಿ ಭ್ರಷ್ಟಾಚಾರ ಹಗರಣ ಕೇಳಿಬಂದಿದ್ದು, ಟಿಸಿಎಸ್​​ನಲ್ಲಿ ಕೆಲಸಕ್ಕಾಗಿ ಅಲ್ಲಿನ ಹಿರಿಯ ಅಧಿಕಾರಿಗಳು ಲಂಚ ಪಡೆದ ಪ್ರಕರಣದ ಮೇರೆಗೆ 4 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಬರೋಬ್ಬರಿ 100 ಕೋಟಿ ಲಂಚ ಪಡೆದು ಉದ್ಯೋಗ ನೀಡಿದ ಹಗರಣ ಇದೀಗ ಬೆಳಕಿಗೆ  ಬಂದಿದ್ದು, ಕಳೆದ ಮೂರು ವರ್ಷಗಳಿಂದ ಸುಮಾರು 100 ಕೋಟಿಯಷ್ಟು ಲಂಚ ಪಡೆದು ಸಾವಿರಾರು ಮಂದಿಗೆ ಕೆಲಸ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಪ್ರಕರಣ ಸಂಬಂಧ ನಾಲ್ವರು ಟಿಸಿಎಸ್ ಹಿರಿಯ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. 

ಮೂಲಗಳ ಪ್ರಕಾರ ನೇಮಕಾತಿಗೆ ದುಡ್ಡು ಪಡೆದಿದ್ದಲ್ಲದೆ ಅಸಮರ್ಥರಿಗೆ ಉದ್ಯೋಗ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಕಂಪನಿಯ ನೇಮಕಾತಿ ವಿಭಾಗದ ಚೀಫ್ ಎಕ್ಸೂಕೂಟೀವ್ ಆಫೀಸರ್, ಚೀಫ್ ಆಫರೇಟಿಂಗ್ ಆಫೀಸರ್, ರಿಸೋರ್ಸ್ ಮ್ಯಾನೇಜ್ಮೆಂಟ್ ಗ್ರೂಪ್ ಅಧಿಕಾರಿ ಸೇರಿ ನಾಲ್ವರು ಅಧಿಕಾರಿಗಳನ್ನು ಟಿಸಿಎಸ್​​ನಿಂದ ವಜಾ ಮಾಡಲಾಗಿದೆ. 

ದೈತ್ಯ ಐಟಿ ಕಂಪನಿ ಟಿಸಿಎಸ್‌ ಒಟ್ಟು 6 ಲಕ್ಷ ಉದ್ಯೋಗಿಗಳನ್ನು ಹೊಂದಿದೆ. ಭಾರತದಲ್ಲಿ ಮಾತ್ರ 614,795 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಕಂಪನಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಕಂಪನಿ ಮುಂದಾಗಿದೆ. ಅಲ್ಲದೆ ಹಣ ನೀಡಿ ಕೆಲಸ ಪಡೆದ ನೌಕರರ ಮೇಲೂ ಸಂಸ್ಥೆ ಕ್ರಮಕ್ಕೆ ಮುಂದಾಗಿದ್ದು ಈ ಸಂಬಂಧ ಆಂತರಿಕ ತನಿಖೆ ನಡೆಸಲು ಮುಂದಾಗಿದೆ ಎಂದು ಹೇಳಲಾಗಿದೆ. 

ಸದ್ಯ ಹಣ ನೀಡಿ ಕೆಲಸ ಗಿಟ್ಟಿಸಿಕೊಂಡವರಿಗೆ ಆತಂಕ ಶುರುವಾಗಿದ್ದು, ಯಾವಾಗ ಬೇಕಾದರೂ ಕಿತ್ತಾಕಬಹುದು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಿ-ಫೋರ್ಸ್ ಬ್ಲಾಕೌಟ್ ನಿಂದ ಪತನ ಸಾಧ್ಯತೆ: ತೇಜಸ್ ಅಪಘಾತ ಬಗ್ಗೆ ತಜ್ಞರು; ಮಗನ ಸಾವಿನ ಸುದ್ದಿ Youtube ನೋಡಿ ತಿಳಿದುಕೊಂಡ ಪೈಲಟ್ ತಂದೆ !

ಬೆಂಗಳೂರು ಎಟಿಎಂ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

ತಪ್ಪಿಗಿಲ್ಲ ಅವಕಾಶ: ದುಬೈನಲ್ಲಿ ತೇಜಸ್ ವಿಮಾನದ ಇಜೆಕ್ಷನ್ ಸೀಟನ್ನು ಮಣಿಸಿದ ಭೌತಶಾಸ್ತ್ರ

ಮೇಡ್ ಇನ್ ಚೈನಾ, ಟರ್ಕಿ.. ಪಾಕ್ ಮೂಲಕ ಭಾರತಕ್ಕೆ ರವಾನೆ, ಬೃಹತ್ ಶಸ್ತ್ರಾಸ್ತ್ರ ಜಾಲ ಭೇದಿಸಿದ ದೆಹಲಿ ಪೊಲೀಸರು!

ಐಟಿ ಸಿಟಿ ಬೆಂಗಳೂರಿನ ಮಕ್ಕಳು ಕಲಿಕೆಯಲ್ಲಿ ಹಿಂದೆ: 3ರಿಂದ 5ನೇ ಕ್ಲಾಸಿನ ಶೇ.18ರಷ್ಟು ಮಕ್ಕಳು ಮಾತ್ರ 2ನೇ ತರಗತಿ ಪಠ್ಯ ಓದಬಲ್ಲರು !

SCROLL FOR NEXT