ಅರವಿಂದ ಕೇಜ್ರಿವಾಲ್ 
ದೇಶ

ಸುಗ್ರೀವಾಜ್ಞೆಯನ್ನು ಬಹಿರಂಗವಾಗಿ ಖಂಡಿಸಲು ಕಾಂಗ್ರೆಸ್ ನಕಾರ, ಅವರ ಮೌನ ಅನುಮಾನ ಹುಟ್ಟುಹಾಕಿದೆ: ಎಎಪಿ

ದೆಹಲಿ ಆಡಳಿತ ಸೇವೆಗಳ ಕುರಿತ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಬಹಿರಂಗವಾಗಿ ಖಂಡಿಸಲು ಕಾಂಗ್ರೆಸ್ "ನಿರಾಕರಿಸಿದೆ" ಎಂದ ಎಎಪಿ, ಕಾಂಗ್ರೆಸ್ ಭಾಗವಹಿಸುವ ಮುಂದಿನ ವಿರೋಧ ಪಕ್ಷಗಳ ಸಭೆಗಳಲ್ಲಿ ಭಾಗವಹಿಸುವುದು...

ನವದೆಹಲಿ: ದೆಹಲಿ ಆಡಳಿತ ಸೇವೆಗಳ ಕುರಿತ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಬಹಿರಂಗವಾಗಿ ಖಂಡಿಸಲು ಕಾಂಗ್ರೆಸ್ "ನಿರಾಕರಿಸಿದೆ" ಎಂದ ಎಎಪಿ, ಕಾಂಗ್ರೆಸ್ ಭಾಗವಹಿಸುವ ಮುಂದಿನ ವಿರೋಧ ಪಕ್ಷಗಳ ಸಭೆಗಳಲ್ಲಿ ಭಾಗವಹಿಸುವುದು ಕಷ್ಟ ಎಂದು ಶುಕ್ರವಾರ ಹೇಳಿದೆ.

ಕಾಂಗ್ರೆಸ್‌ನ ಮೌನ ಅದರ ನಿಜವಾದ ಉದ್ದೇಶಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಎಎಪಿ ಪ್ರಕಟಣೆಯಲ್ಲಿ ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ 17 ವಿರೋಧ ಪಕ್ಷಗಳ ನಾಯಕರು ಇಂದು ಪಾಟ್ನಾದಲ್ಲಿ ಸಭೆ ಸೇರಿದ್ದು, ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು "ಒಟ್ಟಿಗೆ ಕೆಲಸ ಮಾಡಲು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು" ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಆಪ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ತಮಗೆ ಬೆಂಬಲ ನೀಡುವ ಭರವಸೆ ನೀಡದಿದ್ದರೆ ವಿರೋಧ ಪಕ್ಷದ ನಾಯಕರ ಸಭೆಯಿಂದ ಹೊರಗುಳಿಯುವುದಾಗಿ ಎಎಪಿ ಗುರುವಾರ ಹೇಳಿತ್ತು.

"ಆದಾಗ್ಯೂ ಇಂದು ಪಾಟ್ನಾ ಸಭೆಯಲ್ಲಿ ಭಾಗವಹಿಸಿದ್ದ ಎಎಪಿ, ಕೇಂದ್ರದ ಸುಗ್ರೀವಾಜ್ಞೆಯನ್ನು ಸಾರ್ವಜನಿಕವಾಗಿ ಖಂಡಿಸುವಂತೆ ಅನೇಕ ಪಕ್ಷಗಳು ಕಾಂಗ್ರೆಸ್ ಅನ್ನು ಒತ್ತಾಯಿಸಿದವು. ಆದರೆ, ಕಾಂಗ್ರೆಸ್ ಹಾಗೆ ಮಾಡಲು ನಿರಾಕರಿಸಿತು" ಎಂದು ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT