ಸಾಂದರ್ಭಿಕ ಚಿತ್ರ 
ದೇಶ

'ವಿಮಾನ ಹೈಜಾಕ್' ಕುರಿತು ಫೋನ್‌ನಲ್ಲಿ ಸಂಭಾಷಣೆ: ವಿಸ್ತಾರ ವಿಮಾನದಲ್ಲಿದ್ದ ಪ್ರಯಾಣಿಕನ ಬಂಧನ

'ವಿಮಾನ ಹೈಜಾಕ್' ಮಾಡುವ ಬಗ್ಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ಕಾರಣಕ್ಕಾಗಿ ವಿಸ್ತಾರಾ ವಿಮಾನದಲ್ಲಿದ್ದ ರಿತೇಶ್ ಸಂಜಯ್‌ಕುಮಾರ್ ಜುನೇಜಾ ಎಂದು ಗುರುತಿಸಲಾದ 23 ವರ್ಷದ ಪ್ರಯಾಣಿಕನನ್ನು ವಿಮಾನದ ಸಿಬ್ಬಂದಿ ನೀಡಿದ ದೂರಿನ ನಂತರ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮುಂಬೈ: 'ವಿಮಾನ ಹೈಜಾಕ್' ಮಾಡುವ ಬಗ್ಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ಕಾರಣಕ್ಕಾಗಿ ವಿಸ್ತಾರಾ ವಿಮಾನದಲ್ಲಿದ್ದ ರಿತೇಶ್ ಸಂಜಯ್‌ಕುಮಾರ್ ಜುನೇಜಾ ಎಂದು ಗುರುತಿಸಲಾದ 23 ವರ್ಷದ ಪ್ರಯಾಣಿಕನನ್ನು ವಿಮಾನದ ಸಿಬ್ಬಂದಿ ನೀಡಿದ ದೂರಿನ ನಂತರ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ವಿಮಾನ ಮತ್ತು ಇದು ನಡೆದ ಮಾರ್ಗದ ಬಗ್ಗೆ ಯಾವುದೇ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.

ಪೋಲೀಸರ ಪ್ರಕಾರ, ವ್ಯಕ್ತಿ ಫೋನ್‌ನಲ್ಲಿ 'ಹೈಜಾಕ್' ಬಗ್ಗೆ ಮಾತನಾಡುವುದನ್ನು ವಿಮಾನದಲ್ಲಿದ್ದ ಸಿಬ್ಬಂದಿ ಕೇಳಿದ್ದಾರೆ. ಈ ವೇಳೆ ಆ ಪ್ರಯಾಣಿಕರನ್ನು ವಿಚಾರಿಸಿದಾಗ, ಆತ ಮಾನಸಿಕ ಅಸ್ವಸ್ಥ ಎಂದಿದ್ದಾನೆ.

ಮುಂಬೈನ ಸಹಾರ್ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 336 ಮತ್ತು 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಈ ವಿಷಯದ ಕುರಿತು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT