ಜೆ ಪಿ ನಡ್ಡಾ 
ದೇಶ

ಬಿಜೆಪಿಯೇತರ ಸರ್ಕಾರ ಇರುವ ಕಡೆ ಮದ್ಯ ಹಗರಣ ನಡೆಯುತ್ತವೆ: ಜೆ ಪಿ ನಡ್ಡಾ

ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರವಿರುತ್ತದೋ ಅಲ್ಲಿ ಮದ್ಯ ಹಗರಣಗಳು ನಡೆಯುತ್ತಿರುತ್ತವೆ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಟೀಕಿಸಿದ್ದಾರೆ. 

ರಾಂಚಿ: ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರವಿರುತ್ತದೋ ಅಲ್ಲಿ ಮದ್ಯ ಹಗರಣಗಳು ನಡೆಯುತ್ತಿರುತ್ತವೆ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಟೀಕಿಸಿದ್ದಾರೆ. 

ಜಾರ್ಖಂಡ್‌ ರಾಜ್ಯದ ಗಿರಿದಿಹ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ “ಸಂಪರ್ಕ್ ಸೇ ಸಮರ್ಥನ್” ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ನರೇಂದ್ರ ಮೋದಿ ಸರ್ಕಾರ ಮಾಡಿರುವ ಸಾಧನೆಗಳನ್ನು ಉಲ್ಲೇಖಿಸಿ, ಇಂದು ಭಾರತ ಮಾತನಾಡುವಾಗ ಜಗತ್ತು ಕೇಳಿಸಿಕೊಳ್ಳುತ್ತಿರುವುದು ನಿಜವಾಗಿಯೂ ಸಂತೋಷವಾಗಿದೆ ಎಂದು ಹೇಳಿದರು.

ಕೆಲವು ರಾಜ್ಯ ಸರ್ಕಾರಗಳೊಂದಿಗೆ ಲಿಕ್ಕರ್ ನ ಸಂಬಂಧ ಏನು ಎಂಬುದೇ ಅರ್ಥವಾಗುವುದಿಲ್ಲ. ಬಿಜೆಪಿಯೇತರ ಸರ್ಕಾರ ಇರುವಲ್ಲೆಲ್ಲಾ ಮದ್ಯದ ಹಗರಣಗಳು ನಡೆಯುತ್ತವೆ. ಅದೇ ರೀತಿ ಅಕ್ರಮ ಗಣಿಗಾರಿಕೆ ಮತ್ತು ಹೇಮಂತ್ ಸೊರೆನ್ ಅವರ ಕೃಪಾಕಟಾಕ್ಷ ಜಾರ್ಖಂಡ್‌ನಲ್ಲಿ ಪರಸ್ಪರ ಬೇರ್ಪಡಿಸಲಾಗದಂತೆ ಸಂಬಂಧ ಹೊಂದಿವೆ ಎಂದು ಸಹ ಹೇಳಿದರು.

ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಅತಿದೊಡ್ಡ ಭೂ ಹಗರಣ ನಡೆದಿದೆ. ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ರಾಜ್ಯದಲ್ಲಿ ಬಾಂಗ್ಲಾದೇಶಿ ನುಸುಳುಕೋರರಿಗೆ ಹೇಮಂತ್ ಸೊರೆನ್ ಸರ್ಕಾರ ಆಶ್ರಯ ನೀಡಿದೆ ಎಂದರು. 

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಡ್ಡಾ, ಸೊರೇನ್ ಸರ್ಕಾರ ಅಂತ್ಯವಿಲ್ಲದ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವಾಗ ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ ಎಂದರು. 

ಒಂದೆಡೆ, ನಮ್ಮ ಪ್ರಧಾನಿಯವರು ದೇಶದಲ್ಲಿ ಅಭಿವೃದ್ಧಿಯ ಪಯಣವನ್ನು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಆದರೆ ಇಲ್ಲಿ ಜೆಎಂಎಂ-ಕಾಂಗ್ರೆಸ್-ಆರ್ ಜೆಡಿ ಮೈತ್ರಿ ಸರ್ಕಾರವು ಅದನ್ನು ಹಿಂದಕ್ಕೆ ತಳ್ಳಲು ನೋಡುತ್ತಿದೆ ಎಂದರು. 

ಮೋದಿಜಿಯವರನ್ನು ಜಗತ್ತಿನ ಎಲ್ಲೆಡೆ ಹೊಗಳುತ್ತಾರೆ, ಆದರೆ ಕಾಂಗ್ರೆಸ್ಸಿಗರು ಅವರ ವೈಭವೀಕರಣವನ್ನು ಇಷ್ಟಪಡುವುದಿಲ್ಲ ಅಥವಾ ದೇಶದ ವೈಭವೀಕರಣವನ್ನು ಇಷ್ಟಪಡುವುದಿಲ್ಲ. ಕಳೆದ 9 ವರ್ಷಗಳ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿ, 2014 ರಲ್ಲಿ ಭಾರತದ ಆರ್ಥಿಕತೆಯು ವಿಶ್ವದಲ್ಲಿ 10 ನೇ ಸ್ಥಾನದಲ್ಲಿತ್ತು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಅದು 5 ನೇ ಸ್ಥಾನಕ್ಕೆ ಏರಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT