ಖಿನ್ನತೆ (ಸಾಂಕೇತಿಕ ಚಿತ್ರ) 
ದೇಶ

ಜಾರ್ಖಂಡ್: ಡಿಆರ್ ಎಂ ಪತ್ನಿಗೆ ಶೂ ಕಳಚಲು ಹೇಳಿದ್ದೇ ತಪ್ಪಾಯ್ತು!: ಕಳಚಿದ್ದು ಆಸ್ಪತ್ರೆಯ ಸಿಬ್ಬಂದಿಯ ಬಟ್ಟೆ!

ವೈದ್ಯರ ಚೇಂಬರ್ ಗೆ ಬರುವುದಕ್ಕೂ ಮುನ್ನ ಶೂ ಕಳಚಿ ಒಳ ಪ್ರವೇಶಿಸುವಂತೆ ಡಿಆರ್ ಎಂ ಪತ್ನಿಗೆ ಕೇಳಿದ ಆಸ್ಪತ್ರೆಯ ಸಿಬ್ಬಂದಿಯನ್ನು ಅರೆನಗ್ನಗೊಳಿಸಿ ಮನೆಗೆ ಕಳಿಸಿರುವ ವಿಕೃತ ಘಟನೆ ಜಾರ್ಖಂಡ್ ನಲ್ಲಿ ವರದಿಯಾಗಿದೆ.

ಜಾರ್ಖಂಡ್: ವೈದ್ಯರ ಚೇಂಬರ್ ಗೆ ಬರುವುದಕ್ಕೂ ಮುನ್ನ ಶೂ ಕಳಚಿ ಒಳ ಪ್ರವೇಶಿಸುವಂತೆ ಡಿಆರ್ ಎಂ ಪತ್ನಿಗೆ ಕೇಳಿದ ಆಸ್ಪತ್ರೆಯ ಸಿಬ್ಬಂದಿಯನ್ನು ಅರೆನಗ್ನಗೊಳಿಸಿ ಮನೆಗೆ ಕಳಿಸಿರುವ ವಿಕೃತ ಘಟನೆ ಜಾರ್ಖಂಡ್ ನಲ್ಲಿ ವರದಿಯಾಗಿದೆ.

ಧನ್ಬಾದ್ ನಲ್ಲಿರುವ ವಿಭಾಗೀಯ ರೈಲು ವ್ಯವಸ್ಥಾಪಕ (ಡಿಆರ್ ಎಂ) ರ ಚೇಂಬರ್ ನಲ್ಲಿ ಆಸ್ಪತ್ರೆಯ ಸಿಬ್ಬಂದಿಯ ಬಟ್ಟೆಯನ್ನು ಕಳಚಿಸಿ ಅರೆನಗ್ನಗೊಳಿಸಿ ಮನೆಗೆ ಕಳಿಸಲಾಗಿದೆ.

ಘಟನೆಯಿಂದ ಅಘಾತಕ್ಕೆ ಒಳಗಾದ ಆಸ್ಪತ್ರೆಯ ಸಿಬ್ಬಂದಿ ಬಸಂತ್ ಉಪಾಧ್ಯಾಯ ಖಿನ್ನತೆಗೆ ಜಾರಿದ್ದು, ವಿಭಾಗೀಯ ರೈಲ್ವೆ ಆಸ್ಪತ್ರೆಗೆ ದಾಖಲಾಗಿದ್ದರು ನಂತರ ಅವರನ್ನು ಅಸರ್ಫಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸಂತ್ರಸ್ತ ವ್ಯಕ್ತಿ ಉಪಾಧ್ಯಾಯ ಆಸ್ಪತ್ರೆಗೆ ದಾಖಲಾದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ತಮ್ಮ ಕೊಠಡಿಯೊಳಗೆ ಶೂ ಧರಿಸಿ ಬರಲು ಯಾರಿಗೂ ಅವಕಾಶ ನೀಡದಂತೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. 

ಆದರೆ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಡಿಆರ್ ಎಂ ಪತ್ನಿ ಬಂದಿದ್ದರು. ಬಸಂತ್ ಉಪಾಧ್ಯಾಯ ಆ ಮಹಿಳೆಗೆ ಶೂ ಕಳಚಿ ಒಳ ಪ್ರವೇಶಿಸುವಂತೆ ಕೇಳಿದ್ದರು. ಆದರೆ ಮಹಿಳೆ ಶೂ ಧರಿಸಿಯೇ ಒಳ ತೆರಳಿದರು. ಇದಾದ ಬಳಿಕ ಡಿಆರ್ ಎಂ ಸಿಎಂಎಸ್ (ಮುಖ್ಯ ವೈದ್ಯಕೀಯ ನಿರೀಕ್ಷಕ) ರಿಗೆ ಬಸಂತ್ ಉಪಾಧ್ಯಾಯ ಅವರನ್ನು ಕರೆತರುವಂತೆ ಸೂಚಿಸಿ, ಉಪಾಧ್ಯಾಯ ಜೊತೆಗೆ ಅವರ ವಾಹನದಲ್ಲಿ ತೆರಳಿದರು ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಹೇಳಿದ್ದಾರೆ. 

ಸಿಎಂಎಸ್ ಹಾಗೂ ಉಪಾಧ್ಯಾಯ ಇಬ್ಬರೂ ಡಿಆರ್ ಎಂ ಚೇಂಬರ್ ಒಳಗೆ ಹೋದರು. ಅಲ್ಲಿ ಡಿಆರ್ ಎಂ ತಮ್ಮ ಪತ್ನಿಯನ್ನು ವೈದ್ಯರ ಕೊಠಡಿಗೆ ಪ್ರವೇಶಿಸಲು ತಡೆದಿದ್ದಕ್ಕಾಗಿ ಉಪಾಧ್ಯಾಯನನ್ನು ನಿಂದಿಸಿದ್ದಾರೆ. ಅಷ್ಟೇ ಅಲ್ಲ ಉಪಾಧ್ಯಾಯನನ್ನು ಅರೆನಗ್ನಗೊಳಿಸಿ ಮನೆಗೆ ಕಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT