ಜಿಲ್ಲಾ ಮ್ಯಾಜಿಸ್ಟ್ರೇಟ್ ದಿನೇಶ್ ಚಂದ್ರ 
ದೇಶ

ಉತ್ತರಪ್ರದೇಶ: ಬಾಲಾಪರಾಧಿ ಗೃಹದಲ್ಲಿ ಬಾಲಕಿಯರಿಗೆ ಕಿರುಕುಳ; ಐವರನ್ನು ಅಮಾನತುಗೊಳಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್

ಉತ್ತರ ಪ್ರದೇಶದ ಸಹರಾನ್‌ಪುರದ ಬಾಲಾಪರಾಧಿಗೃಹವೊಂದರಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ ನಡೆದಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಸಂಬಂಧ ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ದಿನೇಶ್ ಚಂದ್ರ ಅವರು ಶನಿವಾರ ಐವರನ್ನು ಅಮಾನತುಗೊಳಿಸಿದ್ದು,

ಸಹರಾನ್‌ಪುರ: ಉತ್ತರ ಪ್ರದೇಶದ ಸಹರಾನ್‌ಪುರದ ಬಾಲಾಪರಾಧಿಗೃಹವೊಂದರಲ್ಲಿ ಬಾಲಕಿಯರ ಮೇಲೆ ದೌರ್ಜನ್ಯ ನಡೆದಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಸಂಬಂಧ ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ದಿನೇಶ್ ಚಂದ್ರ ಅವರು ಶನಿವಾರ ಐವರನ್ನು ಅಮಾನತುಗೊಳಿಸಿದ್ದು, ಬಾಲಾಪರಾಧಿ ಗೃಹದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಷಯ ಬೆಳಕಿಗೆ ಬಂದ ಬಳಿಕ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಕೀರ್ತಿ ರಾಜ್ ಅವರು ಹೆಚ್ಚಿನ ತನಿಖೆಗಾಗಿ ಬಾಲಾಪರಾಧಿ ಗೃಹಕ್ಕೆ ತೆರಳಿದ್ದರು. ಈ ವೇಳೆ ಅಧಿಕಾರಿಗಳು ಮತ್ತು ಬಾಲಾಪರಾಧಿಗೃಹದ ಮಕ್ಕಳೊಂದಿಗೆ ಮಾತನಾಡಿದ ನಂತರ ಈ ವಿಷಯವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿನೇಶ್ ಚಂದ್ರ ಅವರಿಗೆ ತಲುಪಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಎಂ ಐವರನ್ನು ಅಮಾನತುಗೊಳಿಸಿದ್ದು, ಮ್ಯಾನೇಜರ್ ಮತ್ತು ಇತರ ಉದ್ಯೋಗಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಸದ್ಯಕ್ಕೆ, ತನಿಖೆ ನಡೆಯುವವರೆಗೆ ಬಾಲಾಪರಾಧಿ ಗೃಹಕ್ಕೆ ಒಳಹೋಗುವ ಮತ್ತು ಹೊರಹೋಗುವವರ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ. ದೂರಿನ ಪ್ರಕಾರ ಬಾಲಾಪರಾಧಿ ಗೃಹದಲ್ಲಿ ಹೆಣ್ಣು ಮಕ್ಕಳೊಂದಿಗೆ ಅಸಭ್ಯ ವರ್ತನೆ ನಡೆದಿದೆ. ತಕ್ಷಣವೇ ಮಹಿಳಾ ಅಧಿಕಾರಿಗಳಿಂದ ತನಿಖೆಗೆ ಆದೇಶಿಸಲಾಗಿದ್ದು, ತನಿಖೆಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಡಿಎಂ ದಿನೇಶ್ ಚಂದ್ರ ತಿಳಿಸಿದ್ದಾರೆ.

ಸರ್ಕಲ್ ಆಫೀಸರ್ (ಸಿಒ) ಮಟ್ಟದ ಅಧಿಕಾರಿಗಳು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಯಾರೇ ತಪ್ಪಿತಸ್ಥರೆಂದು ಕಂಡು ಬಂದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಎಂ ಚಂದ್ರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT