ಸಿಪಿಐ ನಾಯಕ ಡಿ ರಾಜಾ 
ದೇಶ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲೇ ಬೇಕು: ಸಿಪಿಐ ನಾಯಕ ಡಿ ರಾಜಾ

ಭಾರತದ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಕ್ಷವನ್ನು ಎಲ್ಲ ರೀತಿಯಿಂದಲೂ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಭಾನುವಾರ ಹೇಳಿದ್ದಾರೆ.

ನವದೆಹಲಿ: ಭಾರತದ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಕ್ಷವನ್ನು ಎಲ್ಲ ರೀತಿಯಿಂದಲೂ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಭಾನುವಾರ ಹೇಳಿದ್ದಾರೆ.

ಸಂವಿಧಾನ ,ಪ್ರಜಾಪ್ರಭುತ್ವ  ಉಳಿಸಲು ಬಿಜೆಪಿ ಸೋಲಿಸುವುದು ಎಡ ಪಕ್ಷಗಳಿಗೆ ಮಾತ್ರವಲ್ಲ, ಎಲ್ಲಾ ಜಾತ್ಯತೀತ  ಪಕ್ಷಗಳಿಗೆ  ಪ್ರಾಥಮಿಕ ಉದ್ದೇಶವಾಗಿದೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದರು. 

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ  ಚುನಾವಣಾ ತಂತ್ರ, ಮೈತ್ರಿ,  ಸೀಟು ಹಂಚಿಕೆಯ ಪ್ರಶ್ನೆಯನ್ನು ರಾಜ್ಯ ಮಟ್ಟದಲ್ಲಿ ವ್ಯವಹರಿಸಬೇಕು, ಪ್ರತಿ ರಾಜ್ಯದಲ್ಲಿನ ರಾಜಕೀಯ ಶಕ್ತಿಗಳ ಸಮತೋಲನವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ" 
ಇದನ್ನೇ ಪ್ರತಿಪಕ್ಷಗಳ ಸಭೆಯಲ್ಲಿ ಸಿಪಿಐ ಹೇಳಿದೆ ಎಂದರು. 

"ಎಲ್ಲಾ ರಾಜ್ಯಗಳಲ್ಲಿ ಪರಿಸ್ಥಿತಿ ಒಂದೇ ಆಗಿಲ್ಲ. ರಾಜ್ಯದಿಂದ ರಾಜ್ಯಕ್ಕೆ ಪರಿಸ್ಥಿತಿ ಬದಲಾಗುತ್ತದೆ, ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಸೋಲಿಸುವುದು ಎಂಬುದು ಕಾರ್ಯತಂತ್ರವಾಗಬೇಕು ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

Anchor Anushree Marriage: ರೋಷನ್ ಜೊತೆ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ

SCROLL FOR NEXT