ಗೀತಾಂಜಲಿ ಕಟ್ಟಡದೊಳಗೆ ಮರವೊಂದು ಉರುಳಿದ ನಂತರ ಹಾನಿಗೊಳಗಾದ ವಾಹನಗಳ ಪರಿಶೀಲಿಸುತ್ತಿರುವ ಜನರು. 
ದೇಶ

ವರುಣನ ಅವಾಂತರ: ಥಾಣೆಯಲ್ಲಿ ಭಾರಿ ಮಳೆಗೆ ರೆಸ್ಟೋರೆಂಟ್ ಛಾವಣಿ ಕುಸಿತ; ಮೂವರಿಗೆ ಗಾಯ

ಭಾರಿ ಮಳೆಯ ನಂತರ ಮಹಾರಾಷ್ಟ್ರದ ಥಾಣೆ ನಗರದಲ್ಲಿ ರೆಸ್ಟೋರೆಂಟ್‌ನ ಛಾವಣಿ ಕುಸಿದು ಮೂವರು ಗಾಯಗೊಂಡಿದ್ದಾರೆ ಎಂದು ನಾಗರಿಕ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಥಾಣೆ: ಭಾರಿ ಮಳೆಯ ನಂತರ ಮಹಾರಾಷ್ಟ್ರದ ಥಾಣೆ ನಗರದಲ್ಲಿ ರೆಸ್ಟೋರೆಂಟ್‌ನ ಛಾವಣಿ ಕುಸಿದು ಮೂವರು ಗಾಯಗೊಂಡಿದ್ದಾರೆ ಎಂದು ನಾಗರಿಕ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಘೋಡ್‌ಬಂದರ್ ರಸ್ತೆಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಥಾಣೆ ಮಹಾನಗರ ಪಾಲಿಕೆಯ ವಿಪತ್ತು ನಿಯಂತ್ರಣ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ.

ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 12 ಗಂಟೆಗಳ ಅವಧಿಯಲ್ಲಿ ನಗರದಲ್ಲಿ 58.90 ಮಿ.ಮೀ ಮಳೆಯಾಗಿದೆ. ನಗರದಲ್ಲಿ ಈ ವರ್ಷ ಒಟ್ಟು 139.76 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 172.71 ಮಿ.ಮೀ ಮಳೆಯಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಉಲ್ಲಾಸ್‌ನಗರ ಟೌನ್‌ಶಿಪ್‌ನ ಹಲವು ಪ್ರದೇಶಗಳು ಸಹ ಹಾನಿಗೊಳಗಾಗಿವೆ ಎಂದು ಥಾಣೆ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಥಾಣೆ ಮತ್ತು ನೆರೆಯ ಪಾಲ್ಘರ್ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದಿದ್ದು, ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ ಎಂದು ಅಧಿಕಾರಿಗಳು ಈ ಮೊದಲು ತಿಳಿಸಿದ್ದರು.

ಥಾಣೆ ಜಿಲ್ಲೆಯ ಭಿವಂಡಿ, ಕಲ್ಯಾಣ್ ಮತ್ತು ಬದ್ಲಾಪುರ್‌ನಲ್ಲಿ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಶನಿವಾರ ಸಂಜೆ ಜನರು ಮೊಣಕಾಲು ಉದ್ದದ ನೀರಿನ ಮೂಲಕ ತೆರಳಬೇಕಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT