ನಿರ್ಮಲಾ ಸೀತಾರಾಮನ್ 
ದೇಶ

ಕರ್ನಾಟಕ ಸೇರಿ 16 ರಾಜ್ಯಗಳಿಗೆ 56,415 ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆಗಳಿಗೆ ಕೇಂದ್ರ ಅಸ್ತು

ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ.

ನವದೆಹಲಿ: ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ.

ರಾಜ್ಯಗಳಿಂದ ಬಂಡವಾಳ ವೆಚ್ಚವನ್ನು ಹೆಚ್ಚಿಸಲು 2023-24 ರ ಕೇಂದ್ರ ಬಜೆಟ್‌ನಲ್ಲಿ 'ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24' ಯೋಜನೆಯನ್ನು ಘೋಷಿಸಲಾಗಿತ್ತು. ಈ ಯೋಜನೆಯಡಿ ಕರ್ನಾಟಕಕ್ಕೆ 3647 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದೆ.

ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚಿನ ನೆರವು ಘೋಷಿಸಲಾಗಿದೆ. ಈ ರಾಜ್ಯಗಳಿಗೆ ಕ್ರಮವಾಗಿ 7,523 ಕೋಟಿ ರೂ.7,850 ರೂ, ಹಾಗೂ 9,640 ಕೋಟಿ ರೂ. ಘೋಷಣೆ ಮಾಡಲಾಗಿದೆ.

ಬಂಡವಾಳ ಹೂಡಿಕೆ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರಗಳಿಗೆ ವಿಶೇಷ ಸಹಾಯವನ್ನು 50 ವರ್ಷಗಳ ಬಡ್ಡಿ ರಹಿತ ಸಾಲದ ರೂಪದಲ್ಲಿ ನೀಡಲಾಗುತ್ತದೆ. 2023-24ರ ಹಣಕಾಸು ವರ್ಷದಲ್ಲಿ 1.3 ಲಕ್ಷ ಕೋಟಿ ರೂ. ನೀಡಲು ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ