ದೆಹಲಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ 
ದೇಶ

'ಕೆಲಸ ಹೇಗೆ ನಡೆಯುತ್ತಿದೆ, ದೇಶದಲ್ಲಿ ಏನಾಗುತ್ತಿದೆ' ದೆಹಲಿಗೆ ಬಂದಿಳಿದ ಕೂಡಲೇ ಬಿಜೆಪಿ ನಾಯಕರನ್ನು ಕೇಳಿ ತಿಳಿದುಕೊಂಡ ಪ್ರಧಾನಿ ಮೋದಿ

ಅಮೆರಿಕ ಮತ್ತು ಈಜಿಪ್ಟ್ ದೇಶಗಳ ಪ್ರವಾಸ ಯಶಸ್ವಿಯಾಗಿ ಮುಗಿಸಿಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Narendra Modi) ಇಂದು ಸೋಮವಾರ ನಸುಕಿನ ಜಾವ ದೆಹಲಿಗೆ ಬಂದಿಳಿದರು.

ನವದೆಹಲಿ: ಅಮೆರಿಕ ಮತ್ತು ಈಜಿಪ್ಟ್ ದೇಶಗಳ ಪ್ರವಾಸ ಯಶಸ್ವಿಯಾಗಿ ಮುಗಿಸಿಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Narendra Modi) ಇಂದು ಸೋಮವಾರ ನಸುಕಿನ ಜಾವ ದೆಹಲಿಗೆ ಬಂದಿಳಿದರು.

ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ದೆಹಲಿಯ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ ದೇವ್, ದೆಹಲಿಯ ಬಿಜೆಪಿ ಸಂಸದರು, ವಿದೇಶಾಂಗ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಮೊದಲಾದವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಅಮೆರಿಕ ಮತ್ತು ಈಜಿಪ್ಟ್ ದೇಶಗಳ ಪ್ರವಾಸ ವೇಳೆ ಪ್ರಧಾನಿಯವರು ಅಪಾರ ಜನಪ್ರಿಯತೆ ಗಳಿಸಿದ್ದು ಮಾತ್ರವಲ್ಲದೆ ವ್ಯಾಪಾರ, ಆಹಾರ ಭದ್ರತೆ, ತಂತ್ರಜ್ಞಾನ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಹಲವು ಪ್ರಯೋಜನಗಳು ಆಗಿವೆ.

ಪ್ರವಾಸ ಮುಗಿಸಿ ಬಂದಿರುವ ಪ್ರಧಾನಿಯವರು ಇಂದು ವಿಶ್ರಾಂತಿ ತೆಗೆದುಕೊಳ್ಳುತ್ತಿಲ್ಲ. ಬದಲಿಗೆ ಹಲವು ಪ್ರಮುಖ ಸಭೆಗಳು, ಪರಾಮರ್ಶೆ ಸಭೆಗಳಲ್ಲಿ ಭಾಗಿಯಾಗುತ್ತಿದ್ದಾರೆ. 

ಭಾರತದಲ್ಲಿ ಏನು ನಡೆಯುತ್ತಿದೆ?: ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಬಿಜೆಪಿ ನಾಯಕರು ಅವರನ್ನು ಗುಲಾಬಿ ನೀಡಿ ಸ್ವಾಗತಿಸಿದರು. ಆಗ ಭಾರತದಲ್ಲಿ ಏನು ನಡೆಯುತ್ತಿದೆ, ಏನಾಗುತ್ತಿದೆ ಎಂದು ಮೋದಿಯವರು ಕೇಳಿದ್ದಾರೆ.

ಅವರು ವಿಮಾನದಲ್ಲಿ ಕೆಳಗಿಳಿಯುತ್ತಿದ್ದಂತೆ ನಮ್ಮನ್ನು ಕೇಳಿದ ಮಾತು ನಾವೆಲ್ಲಾ ಹೇಗೆ ಕೆಲಸ ಮಾಡುತ್ತಿದ್ದೇವೆ ಮತ್ತು ದೇಶದಲ್ಲಿ ಏನಾಗುತ್ತಿದೆ ಎಂದು ದೆಹಲಿಯ ಸಂಸದರೊಬ್ಬರು ಹೇಳಿದರು.

ಕೇಂದ್ರದಲ್ಲಿ ಮೋದಿ ಸರ್ಕಾರ 9 ವರ್ಷ ಆಡಳಿತ ನಡೆಸಿದ ಅಂಗವಾಗಿ ಬಿಜೆಪಿ ಒಂದು ತಿಂಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸುಶಾನ್ ಮತ್ತು ಸೇವಾ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜನರ ಬೆಳವಣಿಗೆ ಮತ್ತು ಅಬಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ಅವರನ್ನು ಪಕ್ಷದ ನಾಯಕರು ಜನರನ್ನು ಹೇಗೆ ತಲುಪುತ್ತಿದ್ದಾರೆ ಎಂದು ಕೇಳಿ ತಿಳಿದುಕೊಂಡರು.

ಸರ್ಕಾರದ ರಿಪೋರ್ಟ್ ಕಾರ್ಡು ಜನರನ್ನು ತಲುಪುತ್ತಿದೆಯೇ ಎಂದು ಕೇಳಿದರು. ಅಲ್ಲದೆ ಜೆ ಪಿ ನಡ್ಡಾ ಅವರ ತೆಲಂಗಾಣ ಭೇಟಿಯ ಬಗ್ಗೆ ಸಹ ಪ್ರಧಾನ ಮಂತ್ರಿಗಳು ಕೇಳಿ ತಿಳಿದುಕೊಂಡರು ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT