ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 
ದೇಶ

ನವದೆಹಲಿ ವಿಮಾನ ನಿಲ್ದಾಣ: ನಕಲಿ ಕಸ್ಟಮ್ಸ್ ಅಧಿಕಾರಿಗಳಿಂದ ಪ್ರಯಾಣಿನಿಗೆ ವಂಚನೆ

ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎಂದು ಹೇಳಿಕೊಂಡ ಇಬ್ಬರು ವ್ಯಕ್ತಿಗಳು, ಸೌದಿ ಅರೇಬಿಯಾದಿಂದ ಬರುತ್ತಿದ್ದ ಪ್ರಯಾಣಿಕರೊಬ್ಬರಿಗೆ ರಿಯಾಲ್ 19,000 (ರೂ. 4.15 ಲಕ್ಷ) ವಂಚಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎಂದು ಹೇಳಿಕೊಂಡ ಇಬ್ಬರು ವ್ಯಕ್ತಿಗಳು, ಸೌದಿ ಅರೇಬಿಯಾದಿಂದ ಬರುತ್ತಿದ್ದ ಪ್ರಯಾಣಿಕರೊಬ್ಬರಿಗೆ ರಿಯಾಲ್ 19,000 (ರೂ. 4.15 ಲಕ್ಷ) ವಂಚಿಸಿದ್ದಾರೆ.

ಆರೋಪಿಗಳು ನಕಲಿ ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿ ತಮ್ಮ ಕಾರಿನಲ್ಲಿ ಪ್ರಯಾಣಿಕನನ್ನು ವಿಮಾನ ನಿಲ್ದಾಣದಿಂದ ಕರೆದೊಯ್ದಿದ್ದಾರೆ. ನಂತರ ದಾರಿ ಮಧ್ಯೆ ಅವರನ್ನು ಬೆದರಿಸಿ 19,000 ರಿಯಾಲ್‌ಗಳು ಮತ್ತು ಕೆಲವೊಂದು ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಹಣ ಕಳೆದುಕೊಂಡಿರುವ ಮೊಹಮ್ಮದ್ ಸುಲೇಮಾನ್, ಕಳೆದ ಎರಡು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ವಾಸಿಸುತ್ತಿದ್ದು, ಕೂಲಿ ಕೆಲಸ ಮಾಡುತ್ತಿದ್ದರು ಎಂದು ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ದಾಖಲಾದ ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಸುಲೇಮಾನ್ ಭಾನುವಾರ  ಸೌದಿ ಅರೇಬಿಯಾದ ರಿಯಾದ್‌ನಿಂದ ಫ್ಲೈನಾಸ್ ಏರ್‌ಲೈನ್ಸ್‌ನಲ್ಲಿ ದೆಹಲಿಗೆ ಬಂದಿದ್ದರು. ಸೋಮವಾರ ಮುಂಜಾನೆ 3.30ರ ಸುಮಾರಿಗೆ ವಿಮಾನ ಲ್ಯಾಂಡ್ ಆಗಿತ್ತು. ಮುಂಜಾನೆ 4 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಿಂದ ಲಿಫ್ಟ್ ನಿಂದ ಹೊರ ಬಂದ ತಕ್ಷಣ ಅಲ್ಲಿಗೆ ಬಂದ ಇಬ್ಬರು ಕಸ್ಟಮ್ಸ್ ಇಲಾಖೆಯವರು ಎಂದು ಹೇಳಿ, ತನ್ನ ಪಾಸ್ ಪೋರ್ಟ್ ವಶಕ್ಕೆ ಪಡೆದು ದೆಹಲಿಯ ಮಹಿಪಾಲ್‌ಪುರ ಗ್ರಾಮಕ್ಕೆ ಕರೆದುಕೊಂಡು ಹೋದರು ಎಂದು ವಂಚನೆಗೊಳಗಾದವರು ಆರೋಪಿಸಿದ್ದಾರೆ.

ಈ ಸಂಬಂಧ ಇಂದಿರಾ ಗಾಂಧಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT