ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಟ್ರಕ್​ ಡಿಕ್ಕಿ ಹೊಡೆದು ಹೊತ್ತಿ ಉರಿದ ಲಾರಿಗಳು; ಐವರು ಸಜೀವ ದಹನ

ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಯಲ್ಲಿ ಬುಧವಾರ ಲಾರಿಯೊಂದು ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.

ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಯಲ್ಲಿ ಬುಧವಾರ ಲಾರಿಯೊಂದು ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.

ಭೀಕರ ಅಪಘಾತದಲ್ಲಿ ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ಟ್ರಕ್‌ಗಳು ಹೊತ್ತಿ ಉರಿದಿದ್ದು, ಹನ್ನೆರಡು ಜಾನುವಾರು ಸಹ ಸಜೀವ ದಹನಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ ಗ್ರಾಮಾಂತರದ ದುಡು ಪ್ರದೇಶದಲ್ಲಿ ಇಂದು ಬೆಳಗ್ಗೆ 5.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಟ್ರಕ್ ಡಿಕ್ಕಿಯ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಅದು ಎಲ್ಲಾ ಮೂರು ಟ್ರಕ್‌ಗಳಿಗೂ ಆವರಿಸಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಜೈಪುರ ಗ್ರಾಮಾಂತರ) ದಿನೇಶ್ ಶರ್ಮಾ ತಿಳಿಸಿದ್ದಾರೆ.

ಒಂದು ಟ್ರಕ್‌ನ ಚಾಲಕ ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಮೃತರನ್ನು ಹರ್ಯಾಣದ ಮೂವರು ಪವನ್(28), ಸಂಜು(18), ಧರಮ್‌ವೀರ್(34) ಮತ್ತು ಬಿಹಾರದ ಛಾಪ್ರಾ ಮೂಲದ ಇಬ್ಬರು - ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸಲಾಗಿದೆ.

"ಎರಡು ಟ್ರಕ್‌ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು" ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT