ಗುವಾಹಟಿ: ಅಸ್ಸಾಂ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಯುಡಿಎಫ್ ಶಾಸಕನನ್ನು ಬಂಧಿಸಲಾಗಿದೆ.
ಇದಷ್ಟೇ ಅಲ್ಲದೇ ಶಾಸಕನ ವಿರುದ್ಧ ಪೊಲೀಸ್ ಸಿಬ್ಬಂದಿಯ ಗಸ್ತು ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಆರೋಪ ಕೇಳಿಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗುರುವಾರ ಮಾಹಿತಿ ನೀಡಿದ್ದಾರೆ.
ಅಲಗಾಪುರ್ ಶಾಸಕ ಮತ್ತು ಇತರ ಮೂವರು ಪಂಚಗ್ರಾಮದ ಧೋಳೇಶ್ವರಿ ಪಾಯಿಂಟ್ ಬಳಿ ಬುಧವಾರ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಸದಸ್ಯ ಅತೌರ್ ರಹಮಾನ್ ಲಸ್ಕರ್ ದೂರು ದಾಖಲಿಸಿದ್ದಾರೆ, ನಂತರ ಅವರು ಕಟಖಾಲ್ ಹೊರಠಾಣೆ, ಹೈಲಕಂಡಿ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಡೋಲೆಗೆ ಧಾವಿಸಿ ಪರಿಶೀಲನೆ ನಡೆಸಿದ್ದರು.