ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿ ಸುನೀಲ್ ಕಮಾರ್ 
ದೇಶ

ಎಲ್ಲಾ ಪಂಚಾಯತ್ ಗಳು 'ಯುಪಿಎ ಪಾವತಿಗೆ ಶಕ್ತ' ಎಂದು ಆಗಸ್ಟ್ 15 ರಂದು ಘೋಷಣೆ: ಪಂಚಾಯತ್ ರಾಜ್ ಸಚಿವಾಲಯ

ಆಗಸ್ಟ್ 15ರಿಂದ ದೇಶದಾದ್ಯಂತ ಎಲ್ಲಾ ಪಂಚಾಯತ್‌ಗಳ ಅಭಿವೃದ್ಧಿ ಕಾರ್ಯಗಳು ಮತ್ತು ಆದಾಯ ಸಂಗ್ರಹಣೆಗೆ ಕಡ್ಡಾಯವಾಗಿ ಡಿಜಿಟಲ್ ಪಾವತಿ ಬಳಸಲಿದ್ದು, ಯುಪಿಐ ಪಾವತಿಗೆ ಶಕ್ತ ಎಂದು ಘೋಷಿಸಲಾಗುವುದು ಎಂದು ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ.

ನವದೆಹಲಿ: ಆಗಸ್ಟ್ 15 ರಿಂದ ದೇಶದಾದ್ಯಂತ ಎಲ್ಲಾ ಪಂಚಾಯತ್‌ಗಳ ಅಭಿವೃದ್ಧಿ ಕಾರ್ಯಗಳು ಮತ್ತು ಆದಾಯ ಸಂಗ್ರಹಣೆಗೆ ಕಡ್ಡಾಯವಾಗಿ ಡಿಜಿಟಲ್ ಪಾವತಿ ಬಳಸಲಿದ್ದು, ಯುಪಿಐ ಪಾವತಿಗೆ ಶಕ್ತ ಎಂದು ಘೋಷಿಸಲಾಗುವುದು ಎಂದು ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ.

ಈ ಸಂಬಂಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಸಚಿವಾಲಯ, ಮುಖ್ಯಮಂತ್ರಿ, ಸಂಸದರು ಮತ್ತು ಶಾಸಕರಂತಹ ಗಣ್ಯರ ಸಮ್ಮುಖದಲ್ಲಿ 'ಯುಪಿಐ ಪಾವತಿ' ಅನುಕೂಲವಿರುವ ಪಂಚಾಯತ್‌ಗಳೆಂದು ಘೋಷಿಸಬೇಕು ಮತ್ತು ಅವುಗಳನ್ನು ಉದ್ಘಾಟಿಸಬೇಕು ಎಂದು ಸಚಿವಾಲಯ ತಿಳಿಸಿದೆ. 

ಸುಮಾರು ಶೇ. 98 ರಷ್ಟು ಪಂಚಾಯತ್ ಗಳು ಈಗಾಗಲೇ ಯುಪಿಐ ಆಧಾರಿತ ಪಾವತಿಗಳನ್ನು ಬಳಸಲು ಪ್ರಾರಂಭಿಸಿವೆ. ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆ (ಪಿಎಂಎಫ್‌ಎಸ್) ಮೂಲಕ ಸುಮಾರು 1.5 ಲಕ್ಷ ಕೋಟಿ ರೂ. ಪಾವತಿ ಮಾಡಲಾಗಿದೆ. ಪಂಚಾಯತ್‌ಗಳಲ್ಲಿ ಪಾವತಿಯನ್ನು ಈಗ ಡಿಜಿಟಲ್ ರೂಪದಲ್ಲಿ ಮಾಡಲಾಗುತ್ತದೆ. ಚೆಕ್ ಮತ್ತು ನಗದು ಪಾವತಿಯನ್ನು ಬಹುತೇಕ ನಿಲ್ಲಿಸಲಾಗಿದೆ ಎಂದು ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಇದು ಈಗ ಬಹುತೇಕ ಸಾರ್ವತ್ರಿಕ ವ್ಯಾಪ್ತಿಯನ್ನು ಹೊಂದಿದೆ. ಜೂನ್ 30 ರಂದು ಸೇವಾ ಪೂರೈಕೆದಾರರು ಮತ್ತು ಮಾರಾಟಗಾರರೊಂದಿಗೆ ಸಭೆ ನಡೆಸುವಂತೆ ಪಂಚಾಯತ್‌ಗಳಿಗೆ ತಿಳಿಸಲಾಗಿದೆ. ಯುಪಿಐ ಪ್ಲಾಟ್‌ಫಾರ್ಮ್‌ಗಳಾದ GPay, PhonePay, Paytm, BHIM, Mobikwik, WhatsApp Pay, Amazon Pay ಮತ್ತು Bharat Pe ನಿಂದ ಸಂಪರ್ಕಿತ ವ್ಯಕ್ತಿಗಳ ವಿವರಗಳೊಂದಿಗೆ ಪಟ್ಟಿಯನ್ನು ಸಚಿವಾಲಯವು ಹಂಚಿಕೊಂಡಿದೆ. ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಜುಲೈ 15 ರೊಳಗೆ ಪಂಚಾಯತ್‌ಗಳು ಸೂಕ್ತ ಸೇವಾ ಪೂರೈಕೆದಾರರನ್ನು ಆಯ್ಕೆ ಮಾಡಬೇಕು ಮತ್ತು ಜುಲೈ 30 ರೊಳಗೆ ಮಾರಾಟಗಾರರನ್ನು ಅಂತಿಮಗೊಳಿಸಬೇಕು.

ಡಿಜಿಟಲ್ ವಹಿವಾಟು ಸಕ್ರಿಯದಿಂದ ಭ್ರಷ್ಟಾಚಾರ ತಡೆಗೆ ಸಹಾಯ ಮಾಡುತ್ತದೆ ಎಂದು ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಹೇಳಿದ್ದಾರೆ. ಬಹುತೇಕ ಪಂಚಾಯಿತಿಗಳು ಈಗ ಡಿಜಿಟಲ್ ಪಾವತಿಯನ್ನು ಬಳಸುತ್ತಿವೆ. ಇದು ಭ್ರಷ್ಟಾಚಾರವನ್ನು ತಡೆಯಲು ಸಹಾಯ ಮಾಡುತ್ತದೆ, ಯೋಜನೆಯಿಂದ ಪಾವತಿಯವರೆಗೆ ಎಲ್ಲವೂ ಡಿಜಿಟಲ್ ರೂಪದಲ್ಲಿ ನಡೆಯುತ್ತಿದೆ ಎಂದು ಪಾಟೀಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT