ಸಂಗ್ರಹ ಚಿತ್ರ 
ದೇಶ

ಮಹಾರಾಷ್ಟ್ರ: ಹುಲಿ ದಾಳಿಗೆ ವ್ಯಕ್ತಿ ಬಲಿ; ಅರಣ್ಯ ಸಿಬ್ಬಂದಿಗಳ ಮೇಲೆ ಗ್ರಾಮಸ್ಥರ ದಾಳಿ

ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೆಂಡಾಮಂಡಲಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿರುವ ಘಟನೆಯೊದಂದು ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಬಾಂದ್ರಾ: ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೆಂಡಾಮಂಡಲಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿರುವ ಘಟನೆಯೊದಂದು ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಗ್ರಾಮಸ್ಥರ ದಾಳಿಗೆ ಇಬ್ಬರು ಅರಣ್ಯ ಸಿಬ್ಬಂದಿಗಳು ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಗಾಯಗೊಂಡಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮತ್ತು ಇಬ್ಬರು ಅರಣ್ಯ ಸಿಬ್ಬಂದಿಗಳು ನಾಗ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಂದ್ರಾದ ಪಯೋನಿ ತಹಸಿಲ್‌ನ ಖಟ್ಖೇಡಾ ಗ್ರಾಮದಲ್ಲಿ ಈಶ್ವರ್ ಮೋಟ್‌ಘರೆ (52) ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದ ಹುಲಿ. ವ್ಯಕ್ತಿಯನ್ನು ಕೊಂದು ಹಾಕಿತ್ತು.

ಘಟನೆ ಬಳಿಕ ಅರಣ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಹುಲಿ ಹಿಡಿಯಲು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಘಟನೆ ಬಳಿಕ ಗಾಯಗೊಂಡ ಅರಣ್ಯ ಸಿಬ್ಬಂದಿಗಳನ್ನು ನಾಗ್ಪುರದ ಆಸ್ಪತ್ರೆಗೆ ದಾಖಲಿಸಲಾಯಿತು, ನಂತರ ಮಹಾರಾಷ್ಟ್ರ ಅರಣ್ಯ ಇಲಾಖೆಯ ಇತರೆ ಸಿಬ್ಬಂದಿಗಳು ಹುಲಿಯನ್ನು ಸೆರೆಹಿಡಿದು, ನಾಗಪುರದ ಗೊರೆವಾಡ ರಕ್ಷಣಾ ಕೇಂದ್ರಕ್ಕೆ ರವಾನಿಸಿದರು.

ಈ ನಡುವೆ ಹುಲಿ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) 30,000 ರೂಪಾಯಿ ಪರಿಹಾರ ಮತ್ತು 9.70 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT