ಸಾಂಕೇತಿಕ ಚಿತ್ರ 
ದೇಶ

ಶಿವಸೇನೆಯ 40 ಶಾಸಕರನ್ನು ಅನರ್ಹಗೊಳಿಸುವ ಮೂಲಕ ಪ್ರಧಾನಿ ಯುಸಿಸಿ ಯನ್ನು ಗೌರವಿಸಲಿ: ಉದ್ಧವ್ ಠಾಕ್ರೆ ಬಣ

ಶಿವಸೇನೆಯ ಉದ್ಧವ್ ಠಾಕ್ರೆ ಬಣ ಏಕರೂಪ ನಾಗರಿಕ ಸಂಹಿತೆ ಜಾರಿಯ ಕುರಿತು ಮಾತನಾಡಿದ್ದು, ಷರಿಯಾಗೆ ವಿರುದ್ಧವಾಗಿರುವುದೇ ಯುಸಿಸಿಯ ಆಧಾರವಾಗಿರಬಾರದು ಎಂದು ಹೇಳಿದೆ.

ಮುಂಬೈ: ಶಿವಸೇನೆಯ ಉದ್ಧವ್ ಠಾಕ್ರೆ ಬಣ ಏಕರೂಪ ನಾಗರಿಕ ಸಂಹಿತೆ ಜಾರಿಯ ಕುರಿತು ಮಾತನಾಡಿದ್ದು, ಷರಿಯಾಗೆ ವಿರುದ್ಧವಾಗಿರುವುದೇ ಯುಸಿಸಿಯ ಆಧಾರವಾಗಿರಬಾರದು, ಯುಸಿಸಿ ಎಂದರೆ ಎಲ್ಲರಿಗೂ ಸಮಾನವಾದ ಕಾನೂನು ಮತ್ತು ನ್ಯಾಯ ಆಗಿರಬೇಕು ಎಂದು ಅಭಿಪ್ರಾಯಪಟ್ಟಿದೆ. 

ಷರಿಯಾ ಇಸ್ಲಾಮಿಕ್ ಧಾರ್ಮಿಕ ಕಾನೂನಾಗಿದ್ದು, ಕುರಾನ್ ಹಾಗೂ ಮೊಹಮ್ಮದ್ ಅವರ ಸಾಂಪ್ರದಾಯಿಕ ಬೋಧನೆಗಳನ್ನು ಆಧರಿಸಿದೆ.

ಶಿವಸೇನೆ ಉದ್ಧವ್ ಬಣದ ಮುಖವಾಣಿ ಸಾಮ್ನಾದಲ್ಲಿ ಪ್ರಕಟವಾಗಿರುವ ಸಂಪಾದಕೀಯದಲ್ಲಿ, ಪ್ರಧಾನಿ ನರೇಂದ್ರ ಮೋದಿ, ಶಿವಸೇನೆಯ 40 ಶಾಸಕರನ್ನು ಅನರ್ಹಗೊಳಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯನ್ನು ಗೌರವಿಸಲಿ ಎಂದು ಹೇಳಿದೆ.

ಭಿವಾಂಡಿ ನಿಜಾಮ್ ಪುರ ಸಿಟಿ ಮುನ್ಸಿಪಲ್ ಕಾರ್ಪೊರೇಷನ್ (ಬಿಎನ್ ಸಿಎಂಸಿ) ಯ 18 ಮಾಜಿ ಕಾರ್ಪೊರೇಟರ್ ಗಳನ್ನು, 2019 ರ ಮೇಯರ್ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ ಅನರ್ಹಗೊಳಿಸಿ,  6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಮಾಡಲಾಗಿದೆ. 

ಒಂದು ವೇಳೆ ಆಡಳಿತಾರೂಢ ಪಕ್ಷದ ಭ್ರಷ್ಟ ಸಚಿವರು, ಉದ್ಯಮಿಗಳು, ಜನರನ್ನು ರಕ್ಷಿಸಿ, ವಿಪಕ್ಷಗಳ ನಾಯಕರನ್ನು ಭ್ರಷ್ಟಾಚಾರ ವಿರೋಧಿ ಕಾರಣ ಇಟ್ಟುಕೊಂಡು ಹಣಿಯುವುದಾದರೆ ಅದೆಂತಹ ಕಾನೂನು? ಎಂದು ಉದ್ಧವ್ ಬಣ ಸಾಮ್ನಾದಲ್ಲಿ ಪ್ರಶ್ನಿಸಿದೆ
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT