ಪ್ರಾತಿನಿಧಿಕ ಚಿತ್ರ 
ದೇಶ

ಹಿಂದೂ ಧರ್ಮವನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು ಆಂಧ್ರಪ್ರದೇಶದಲ್ಲಿ 3,000 ದೇವಾಲಯಗಳ ನಿರ್ಮಾಣ

ಆಂಧ್ರಪ್ರದೇಶದ ಪ್ರತಿ ಜಿಲ್ಲೆಯಲ್ಲೂ ದೇವಸ್ಥಾನ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸರ್ಕಾರ, ರಾಜ್ಯದಲ್ಲಿ ದೇಗುಲಗಳ ನಿರ್ಮಾಣವನ್ನು ದೊಡ್ಡ ರೀತಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದೆ.

ಅಮರಾವತಿ: ಆಂಧ್ರಪ್ರದೇಶದ ಪ್ರತಿ ಜಿಲ್ಲೆಯಲ್ಲೂ ದೇವಸ್ಥಾನ ಇರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಸರ್ಕಾರ, ರಾಜ್ಯದಲ್ಲಿ ದೇಗುಲಗಳ ನಿರ್ಮಾಣವನ್ನು ದೊಡ್ಡ ರೀತಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದೆ.

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ನಿರ್ದೇಶನದ ಮೇರೆಗೆ, ಹಿಂದೂ ಧರ್ಮವನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು ಈ ಉಪಕ್ರಮವನ್ನು ಘೋಷಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಕೊಟ್ಟು ಸತ್ಯನಾರಾಯಣ ಹೇಳಿದರು.

'ಬೃಹತ್ ಪ್ರಮಾಣದಲ್ಲಿ ಹಿಂದೂ ನಂಬಿಕೆಯನ್ನು ರಕ್ಷಿಸಲು ಮತ್ತು ಪ್ರಚಾರ ಮಾಡಲು, ದುರ್ಬಲ ವರ್ಗಗಳ ಪ್ರದೇಶಗಳಲ್ಲಿ ಹಿಂದೂ ದೇವಾಲಯಗಳ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ' ಎಂದು ದತ್ತಿ ಸಚಿವರೂ ಆಗಿರುವ ಸತ್ಯನಾರಾಯಣ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನದ ಶ್ರೀ ವಾಣಿ ಟ್ರಸ್ಟ್ ದೇವಾಲಯಗಳ ನಿರ್ಮಾಣಕ್ಕೆ ತಲಾ ₹ 10 ಲಕ್ಷ ವಿನಿಯೋಗಿಸಿದೆ. 1,330 ದೇವಾಲಯಗಳ ನಿರ್ಮಾಣ ಪ್ರಾರಂಭದ ಜೊತೆಗೆ, ಇನ್ನೂ 1,465 ಅನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಅದೇ ರೀತಿ ಕೆಲವು ಶಾಸಕರ ಮನವಿ ಮೇರೆಗೆ ಇನ್ನೂ 200 ದೇವಸ್ಥಾನಗಳನ್ನು ನಿರ್ಮಿಸಲಾಗುವುದು. ಉಳಿದ ದೇವಸ್ಥಾನಗಳ ನಿರ್ಮಾಣವನ್ನು ಇತರೆ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಮಾಡಲಾಗುವುದು ಎಂದರು.

ದತ್ತಿ ಇಲಾಖೆಯ ಅಧೀನದಲ್ಲಿ 978 ದೇವಸ್ಥಾನಗಳ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಪ್ರತಿ 25 ದೇವಸ್ಥಾನಗಳ ಕಾಮಗಾರಿಯನ್ನು ಒಬ್ಬ ಸಹಾಯಕ ಎಂಜಿನಿಯರ್‌ಗೆ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕೆಲವು ದೇವಾಲಯಗಳ ಪುನರುಜ್ಜೀವನಕ್ಕಾಗಿ ಮತ್ತು ದೇವಾಲಯಗಳಲ್ಲಿ ಧಾರ್ಮಿಕ ಕ್ರಿಯೆಗಳನ್ನು ನಡೆಸಲು ₹ 270 ಕೋಟಿ ಸಿಜಿಎಫ್ ನಿಧಿಯಲ್ಲಿ ₹ 238 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಅದೇ ರೀತಿ, ಪ್ರತಿ ದೇವಸ್ಥಾನಕ್ಕೆ ₹ 5,000 ದರದಲ್ಲಿ ಧಾರ್ಮಿಕ ಕ್ರಿಯೆಗಳಿಗೆ (ದೂಪ ದೀಪ ನೈವೇದ್ಯಂ) ಹಣಕಾಸು ವರ್ಷದಲ್ಲಿ ₹ 28 ಕೋಟಿ ಮೀಸಲಿಟ್ಟಿದ್ದು, ಈ ಪೈಕಿ ₹ 15 ಕೋಟಿ ಖಾಲಿಯಾಗಿದೆ.

'ಧೂಪ ದೀಪ' ಯೋಜನೆಯಡಿ, 2019 ರ ವೇಳೆಗೆ ಕೇವಲ 1,561 ದೇವಾಲಯಗಳನ್ನು ನೋಂದಾಯಿಸಲಾಗಿದೆ. ಅದು ಈಗ 5,000 ಕ್ಕೆ ವಿಸ್ತರಿಸಿದೆ ಎಂದು ಸತ್ಯನಾರಾಯಣ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?