ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಕಾಲೇಜಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ರಂಗಾರೆಡ್ಡಿ: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತನನ್ನು ನಾಗುಲಾ ಸಾತ್ವಿಕ್ ಎಂದು ಗುರುತಿಸಲಾಗಿದ್ದು, ಖಾಸಗಿ ಕಾಲೇಜು ಆಡಳಿತ ಮಂಡಳಿ ನೀಡಿದ ಚಿತ್ರಹಿಂಸೆಯಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಆರೋಪಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ ನರಸಿಂಗಿಯಲ್ಲಿರುವ ಖಾಸಗಿ ಕಾಲೇಜಿನ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

"ವಿದ್ಯಾರ್ಥಿ ಏಕೆ ಆತ್ಮಹತ್ಯೆ ಮಾಡಿಕೊಂಡ ಎಂದು ಈಗಲೇ ಹೇಳುವುದು ಕಷ್ಟ. ಆದರೆ, ಖಾಸಗಿ ಕಾಲೇಜಿನ ಮ್ಯಾನೇಜ್‌ಮೆಂಟ್‌ ನೀಡಿದ ಚಿತ್ರಹಿಂಸೆಯಿಂದ ಈ ಸಾವು ಸಂಭವಿಸಿದೆ ಎಂದು ಆತನ ಪೋಷಕರು ಆರೋಪಿಸಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡಿ, ತನಿಖೆ ನಡೆಸುತ್ತಿದ್ದೇವೆ ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ಸುದ್ದಿ ಹೊರಬಿದ್ದ ನಂತರ, ವಿದ್ಯಾರ್ಥಿ ಸಂಘದ ಸದಸ್ಯರು ಮತ್ತು ಹುಡುಗನ ಸಂಬಂಧಿಕರು ನರಸಿಂಗಿಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT