ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಕಾಲೇಜಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ರಂಗಾರೆಡ್ಡಿ: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತನನ್ನು ನಾಗುಲಾ ಸಾತ್ವಿಕ್ ಎಂದು ಗುರುತಿಸಲಾಗಿದ್ದು, ಖಾಸಗಿ ಕಾಲೇಜು ಆಡಳಿತ ಮಂಡಳಿ ನೀಡಿದ ಚಿತ್ರಹಿಂಸೆಯಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಆರೋಪಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ ನರಸಿಂಗಿಯಲ್ಲಿರುವ ಖಾಸಗಿ ಕಾಲೇಜಿನ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

"ವಿದ್ಯಾರ್ಥಿ ಏಕೆ ಆತ್ಮಹತ್ಯೆ ಮಾಡಿಕೊಂಡ ಎಂದು ಈಗಲೇ ಹೇಳುವುದು ಕಷ್ಟ. ಆದರೆ, ಖಾಸಗಿ ಕಾಲೇಜಿನ ಮ್ಯಾನೇಜ್‌ಮೆಂಟ್‌ ನೀಡಿದ ಚಿತ್ರಹಿಂಸೆಯಿಂದ ಈ ಸಾವು ಸಂಭವಿಸಿದೆ ಎಂದು ಆತನ ಪೋಷಕರು ಆರೋಪಿಸಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡಿ, ತನಿಖೆ ನಡೆಸುತ್ತಿದ್ದೇವೆ ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ಸುದ್ದಿ ಹೊರಬಿದ್ದ ನಂತರ, ವಿದ್ಯಾರ್ಥಿ ಸಂಘದ ಸದಸ್ಯರು ಮತ್ತು ಹುಡುಗನ ಸಂಬಂಧಿಕರು ನರಸಿಂಗಿಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT