ಸಂಗ್ರಹ ಚಿತ್ರ 
ದೇಶ

ಎನ್‌ಜಿಒಗಳನ್ನು ವಿಶಿಷ್ಟ ಐಡಿಯೊಂದಿಗೆ ಕೇಂದ್ರದ ಡೇಟಾ ಹಬ್‌ಗೆ ಲಿಂಕ್ ಮಾಡಲು ಕೇಂದ್ರ ಸೂಚನೆ

ಕೇಂದ್ರ ಸರ್ಕಾರವು ಎನ್‌ಜಿಒಗಳ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಹಣದ ಹರಿವಿನ ಬಗ್ಗೆ  ಕಣ್ಗಾವಲು ಮತ್ತು ಈ ಘಟಕಗಳ ಲೆಕ್ಕಪತ್ರ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲು...

ನವದೆಹಲಿ: ಕೇಂದ್ರ ಸರ್ಕಾರವು ಎನ್‌ಜಿಒಗಳ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಹಣದ ಹರಿವಿನ ಬಗ್ಗೆ  ಕಣ್ಗಾವಲು ಮತ್ತು ಈ ಘಟಕಗಳ ಲೆಕ್ಕಪತ್ರ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲು ಆಧಾರ್ ಮಾದರಿಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆಯೊಂದಿಗೆ ಎಲ್ಲಾ ಎನ್‌ಜಿಒಗಳನ್ನು ಕೇಂದ್ರೀಯ ಡೇಟಾ ಹಬ್ ಅಡಿಯಲ್ಲಿ ತರುವ ಕ್ರಮಕ್ಕೆ ಕೇಂದ್ರ ಮುಂದಾಗಿದೆ.

ಭಯೋತ್ಪಾದನೆ ಮತ್ತು 'ಭಾರತ-ವಿರೋಧಿ ಚಟುವಟಿಕೆಗಳನ್ನು ಪ್ರಾಯೋಜಿಸಲು ಹಣವನ್ನು ಬೇರೆಡೆಗೆ ತಿರುಗಿಸಿದ ಆರೋಪದ ಪುರಾವೆಗಳ ನಡುವೆ, ಭಾರತದಲ್ಲಿ ಎನ್‌ಜಿಒ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ ಪ್ರಮುಖ ಕ್ರಮವಾಗಿದೆ.

ಗೃಹ ವ್ಯವಹಾರಗಳ ಸಚಿವಾಲಯದ (MHA) ಮೂಲಗಳ ಪ್ರಕಾರ, 'ಟ್ರಸ್ಟ್ ಮತ್ತು ಸೊಸೈಟಿಗಳು ಸೇರಿದಂತೆ ಹೆಚ್ಚಿನ ಎನ್‌ಜಿಒಗಳು ಫೆಡರಲ್ ಕಾನೂನುಗಳ ವ್ಯಾಪ್ತಿಯಲ್ಲಿ ಬರುತ್ತವೆಯಾದರೂ, ಅವುಗಳ ಆಡಳಿತವು ವಿಕೇಂದ್ರೀಕೃತವಾಗಿದೆ. ವಿವಿಧ ರಾಜ್ಯ ಆಡಳಿತಗಳ ಅಡಿಯಲ್ಲಿದೆ. ಈ ಕಾರಣದಿಂದಾಗಿ ಕೇಂದ್ರೀಕೃತ ಮೇಲ್ವಿಚಾರಣೆಯನ್ನು ಕಷ್ಟಕರವಾಗಿಸುತ್ತಿದೆ. ಹೀಗಾಗಿ ವಿಶಿಷ್ಟ ಗುರುತಿನ ಚೀಟಿ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕೇಂದ್ರ ಸರ್ಕಾರದ ವಿಭಾಗದೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿರುವ ತಂಡಗಳನ್ನು ನಿಯೋಜಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿಗಳು ಮತ್ತು ಐಜಿಪಿಗಳಿಗೆ ಗೃಹ ವ್ಯವಹಾರಗಳ ಸಚಿವಾಲಯ ನಿರ್ದೇಶನ ನೀಡಿದೆ.

ಕೆಲವು ಎನ್‌ಜಿಒಗಳಿಂದ ಮಣಿ ಲಾಂಡರಿಂಗ್ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಧನಸಹಾಯ ನೀಡುತ್ತಿರುವ ನಿದರ್ಶನಗಳನ್ನು ಪತ್ತೆಹಚ್ಚಲು ಮತ್ತು ತನಿಖೆ ಮಾಡಲು ಪರಿಣಾಮಕಾರಿ ಕೇಂದ್ರೀಕೃತ ಕಾರ್ಯವಿಧಾನವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಮಾದರಿಯನ್ನು ವಿನ್ಯಾಸಗೊಳಿಸಿ, ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದಲ್ಲಿ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ(ಎಫ್‌ಸಿಆರ್‌ಎ) ಅಡಿಯಲ್ಲಿ ನೋಂದಾಯಿಸಲಾದ ಎನ್‌ಜಿಒಗಳನ್ನು ಮೀಸಲಾದ ವಿಭಾಗದ ಮೂಲಕ ಗೃಹ ವ್ಯವಹಾರಗಳ ಸಚಿವಾಲಯ ಮೇಲ್ವಿಚಾರಣೆ ಮಾಡುತ್ತಿದ್ದರೆ, ಸುಮಾರು 35 ಲಕ್ಷ ಎನ್‌ಜಿಒಗಳು ಎಫ್‌ಸಿಆರ್‌ಎ ಅಡಿಯಲ್ಲಿ ನೋಂದಾಯಿಸಲ್ಪಟ್ಟಿಲ್ಲ. ಇವು ಸೊಸೈಟಿಯಂತಹ ಸುಮಾರು 40 ವಿವಿಧ ಕಾನೂನುಗಳಿಂದ ನಿಯಂತ್ರಿಸಲ್ಪಡುತ್ತವೆ. ನೋಂದಣಿ ಕಾಯಿದೆ, ಕಂಪನಿಗಳ ಕಾಯಿದೆ, ಸಾರ್ವಜನಿಕ ಟ್ರಸ್ಟ್ ಕಾಯಿದೆ ಮತ್ತು ಸಾಮಾನ್ಯವಾಗಿ ರಾಜ್ಯಗಳ ಕಾನೂನುಗಳಿಂದ ನಿಯಂತ್ರಿಸಲ್ಪಡುತ್ತವೆ. ಆದಾಗ್ಯೂ, ಎರಡೂ ವರ್ಗದ ಎನ್‌ಜಿಒಗಳ ನಿಧಿಯ ತಿರುವು ಮತ್ತು ಮನಿ ಲಾಂಡರಿಂಗ್‌ನಂತಹ ಉಲ್ಲಂಘನೆಗಳಲ್ಲಿ ತೊಡಗಿರುವ ನಿದರ್ಶನಗಳಿವೆ ಎಂದು ಸಚಿವಾಲಯದ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT