ಗುರ್ಮೀತ್ ರಾಮ್ ರಹೀಮ್ ಸಿಂಗ್ 
ದೇಶ

ರಾಮ್ ರಹೀಮ್ ಸರಣಿ ಹಂತಕ ಅಲ್ಲ: ಡೇರಾ ಮುಖ್ಯಸ್ಥನಿಗೆ ಪೆರೋಲ್ ಸಮರ್ಥಿಸಿಕೊಂಡ ಹರಿಯಾಣ ಸರ್ಕಾರ

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ ನೀಡಿರುವ ಪೆರೋಲ್ ಅನ್ನು ಹರಿಯಾಣ ಸರ್ಕಾರ ಸಮರ್ಥಿಸಿಕೊಂಡಿದ್ದು, ಅವರು 'ಕಠಿಣ ಕೈದಿ' ವರ್ಗದ ಅಡಿಯಲ್ಲಿ ಬರುವುದಿಲ್ಲ...

ಚಂಡೀಗಢ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ ನೀಡಿರುವ ಪೆರೋಲ್ ಅನ್ನು ಹರಿಯಾಣ ಸರ್ಕಾರ ಸಮರ್ಥಿಸಿಕೊಂಡಿದ್ದು, ಅವರು 'ಕಠಿಣ ಕೈದಿ' ವರ್ಗದ ಅಡಿಯಲ್ಲಿ ಬರುವುದಿಲ್ಲ ಮತ್ತು ಅವರು ಸರಣಿ ಹಂತಕ ಅಲ್ಲ ಎಂದು ಹೇಳಿದೆ.

ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಮುಖ್ಯಸ್ಥನಿಗೆ ಜನವರಿ 20 ರಂದು 40 ದಿನಗಳ ಪೆರೋಲ್ ನೀಡಲಾಗಿದೆ. ಎರಡು ಕೊಲೆ ಪ್ರಕರಣಗಳಲ್ಲೂ ರಾಮ್ ರಹೀಮ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.

ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ(ಎಸ್‌ಜಿಪಿಸಿ) ಇತ್ತೀಚೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪೆರೋಲ್ ಆದೇಶವನ್ನು ಪ್ರಶ್ನಿಸಿದೆ. ಅಲ್ಲದೆ ಎರಡು ಕೊಲೆ ಪ್ರಕರಣಗಳಲ್ಲಿ ರಾಮ್ ರಹೀಮ್ ಸಿಂಗ್ ಗೆ ಶಿಕ್ಷೆ ಆಗಿರುವುದರಿಂದ ಅವರು "ಸರಣಿ ಹಂತಕ" ಎಂದು ವಾದಿಸಿದೆ.

ಡೇರಾ ಮುಖ್ಯಸ್ಥ ಶಿಕ್ಷೆ ಅನುಭವಿಸುತ್ತಿರುವ ರೋಹ್ಟಕ್‌ನ ಸುನಾರಿಯಾ ಜೈಲಿನ ಅಧೀಕ್ಷಕರ ಮೂಲಕ ನೀಡಿದ ಉತ್ತರದಲ್ಲಿ, ರಾಜ್ಯ ಸರ್ಕಾರವು ಪೆರೋಲ್ ನೀಡುವ ಮೂಲಕ ಯಾವುದೇ ಅಕ್ರಮ ಎಸಗಿಲ್ಲ ಎಂದು ಹೇಳಿದೆ.

ಎಸ್‌ಜಿಪಿಸಿ ವಾದವನ್ನು ತಳ್ಳಿಹಾಕಿದ ರಾಜ್ಯ ಸರ್ಕಾರ, ಎರಡು ವಿಭಿನ್ನ ಕೊಲೆ ಪ್ರಕರಣಗಳಲ್ಲಿ ರಾಮ್ ರಹೀಮ್ ಸಿಂಗ್ ಅವರಿಗೆ ಶಿಕ್ಷೆಯಾಗಿದ್ದು, ಇದನ್ನು "ಸರಣಿ ಕೊಲೆ" ಎಂದು ಕರೆಯಲಾಗುವುದಿಲ್ಲ. ಏಕೆಂದರೆ ಅವರು ನೇರವಾಗಿ ಕೊಲೆ ಮಾಡಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಸಿಎಂ ಜೋಸೆಫ್ ವಿಜಯ್ ಆರೋಪಕ್ಕೆ DMK ಆಕ್ರೋಶ, ಶಾಸಕರು ಸದನದಿಂದ ಹೊರಕ್ಕೆ..!

ಯಶವಂತಪುರ APMCಗೆ ಸಿಎಂ ದಿಢೀರ್ ಭೇಟಿ: ರೈತರ ಅಹವಾಲು ಆಲಿಸಿದ ಡಿಕೆ ಶಿವಕುಮಾರ್, Video

ಬಳ್ಳಾರಿ ಚಲೋ ಸಮಾರೋಪಕ್ಕೆ ಬಿಗ್ ಶಾಕ್: ಬಿಜೆಪಿ ಸಮಾವೇಶಕ್ಕೆ ಶಾಲಾ ಮೈದಾನ ನೀಡಲು ಸರ್ಕಾರದ ನಕಾರ! ‘ಜಾಗ ಹೇಗೆ ಕೊಡಲ್ಲ ನೋಡ್ತೀವಿ’ ಎಂದು ವಿಜಯೇಂದ್ರ ಸವಾಲು

LPG ಗ್ರಾಹಕರಿಗೆ ಕೇಂದ್ರದ ಭರ್ಜರಿ ರಿಲೀಫ್: ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಕ್ಕೆ ಮತ್ತೊಂದು ಸಿಲಿಂಡರ್!

ಹಿಂದು ಧಾರ್ಮಿಕ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ನಿರ್ಬಂಧ? ಪ್ಯಾರಿಸ್‌ನ Eiffel Tower ಬಂದ್, ಭಾರೀ ವಿವಾದ..!