ಗೌತಮ್ ಅದಾನಿ 
ದೇಶ

ಅದಾನಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; ಮೋದಿ ಸರ್ಕಾರಕ್ಕೆ ಕಪಾಳಮೋಕ್ಷ: ಎಎಪಿ

ಇತ್ತೀಚಿಗೆ ಅದಾನಿ ಗ್ರೂಪ್ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಯ ವಿವಿಧ ನಿಯಂತ್ರಕ ಅಂಶಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ...

ನವದೆಹಲಿ: ಇತ್ತೀಚಿಗೆ ಅದಾನಿ ಗ್ರೂಪ್ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಯ ವಿವಿಧ ನಿಯಂತ್ರಕ ಅಂಶಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಇದು ಮೋದಿ ಸರ್ಕಾರಕ್ಕೆ "ದೊಡ್ಡ ಕಪಾಳಮೋಕ್ಷ" ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ಇಂದು ಮೋದಿ ಸರ್ಕಾರ ಭ್ರಷ್ಟ ಮತ್ತು ನಿಷ್ಪ್ರಯೋಜಕ ಎಂಬುದು ಸಾಬೀತಾಗಿದೆ ಎಂದು ಎಎಪಿ ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಅದಾನಿ ಗ್ರೂಪ್ ಹಾಗೂ ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್, ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ  ನೇತೃತ್ವದಲ್ಲಿ ಸಮಿತಿ ರಚಿಸಿದೆ. 

ಸುಪ್ರೀಂ ಕೋರ್ಟ್ ಆದೇಶಕ್ಕೆ ಪ್ರತಿಕ್ರಿಯಿಸಿದ ಎಎಪಿ ನಾಯಕ, "ಇದರಿಂದ ಮೋದಿ ಸರ್ಕಾರ ಕಪಾಳಮೋಕ್ಷ ಮಾಡಿದಂತಾಗಿದೆ. ಅದಾನಿಯನ್ನು ಉಳಿಸಲು ಮೋದಿ ಯಾವ ಹಂತಕ್ಕೂ ಬೇಕಾದರೂ ಹೋಗಬಹುದು ಎಂದರು.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ. ಆದರೆ ಮೋದಿ ಸರ್ಕಾರ ಅದನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ. ಹೀಗಾಗಿ ದೇಶದ ಸುಪ್ರೀಂ ಕೋರ್ಟ್ ಅಂತಿಮವಾಗಿ ಮಧ್ಯಪ್ರವೇಶಿಸಬೇಕಾಯಿತು ಎಂದು ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT