ಪ್ರಧಾನಿ ನರೇಂದ್ರ ಮೋದಿ 
ದೇಶ

ಎಡಪಕ್ಷಗಳ ಆಡಳಿತವಿರುವ ಕೇರಳವೂ ದೂರವಿಲ್ಲ, ಮುಂದಿನ ದಿನಗಳಲ್ಲಿ ಬಿಜೆಪಿ ಅಲ್ಲಿ ಸರ್ಕಾರ ರಚಿಸುತ್ತದೆ: ಪ್ರಧಾನಿ ಮೋದಿ

ನಿನ್ನೆ ಗುರುವಾರ ಪ್ರಕಟವಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿರುವ ವಿಧಾನಸಭಾ ಫಲಿತಾಂಶದಿಂದ ಉತ್ತೇಜಿತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಮುಂದಿನ ದಿನಗಳಲ್ಲಿ ಅದೇ ಮಾದರಿಯಲ್ಲಿ ಎಡಪಕ್ಷಗಳ ಆಡಳಿತವಿರುವ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ನವದೆಹಲಿ: ನಿನ್ನೆ ಗುರುವಾರ ಪ್ರಕಟವಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿರುವ ವಿಧಾನಸಭಾ ಫಲಿತಾಂಶದಿಂದ ಉತ್ತೇಜಿತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಮುಂದಿನ ದಿನಗಳಲ್ಲಿ ಅದೇ ಮಾದರಿಯಲ್ಲಿ ಎಡಪಕ್ಷಗಳ ಆಡಳಿತವಿರುವ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ತ್ರಿಪುರಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಡ-ಕಾಂಗ್ರೆಸ್ ಮೈತ್ರಿಯನ್ನು ವ್ಯಂಗ್ಯವಾಡಿದ ಪ್ರಧಾನಿ, ಈ ಪಕ್ಷಗಳು ಕೇರಳವನ್ನು ಲೂಟಿ ಮಾಡುತ್ತಿವೆ ಎಂದು ಹೇಳಿದರು. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ನಾವು ಸರ್ಕಾರ ರಚಿಸುವ ರೀತಿಯಲ್ಲಿ ಬಿಜೆಪಿ ಮೈತ್ರಿಕೂಟವು ಮುಂದಿನ ದಿನಗಳಲ್ಲಿ ಕೇರಳದಲ್ಲಿ ಸರ್ಕಾರ ರಚಿಸುತ್ತದೆ ಎಂಬ ನನಗೆ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪಿಎಂ ಮೋದಿ, “ಇಂದಿನ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ಫಲಿತಾಂಶಗಳ ನಂತರ, ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಸಣ್ಣ ರಾಜ್ಯಗಳ ಬಗ್ಗೆ ಇರುವ ಅಸಡ್ಡೆ, ದ್ವೇಷ ಬಹಿರಂಗವಾಗಿದೆ. ಈ ಸಣ್ಣ ರಾಜ್ಯಗಳು ಮತ್ತು ಅವುಗಳ ಫಲಿತಾಂಶಗಳು ದೊಡ್ಡ ವಿಷಯವಲ್ಲ ಎಂದು ಅವರು ಹೇಳುತ್ತಾರೆ. ಚುನಾವಣಾ ಫಲಿತಾಂಶದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದರು. 

ಚುನಾವಣೆಯಲ್ಲಿ ಬಿಜೆಪಿಯ ಸತತ ಗೆಲುವಿಗೆ ನಮ್ಮ ಸರ್ಕಾರ ಮಾಡಿದ ಕೆಲಸ, ಕೆಲಸದ ಸಂಸ್ಕೃತಿ ಮತ್ತು ಪಕ್ಷದ ಕಾರ್ಯಕರ್ತರ ಸಮರ್ಪಣೆಯ ‘ತ್ರಿವೇಣಿ’ಗೆ ಮೋದಿ ಮನ್ನಣೆ ನೀಡಿದ್ದಾರೆ. ಕಳೆದ 70 ವರ್ಷಗಳಿಂದ ಈಶಾನ್ಯ ರಾಜ್ಯಗಳು ನಿರ್ಲಕ್ಷಿಸಲ್ಪಟ್ಟಿವೆ ಆದರೆ ಈಗ ಬಿಜೆಪಿ ತನ್ನ ‘ಹಿರಾ’ (ಹೆದ್ದಾರಿ, ಇಂಟರ್ನೆಟ್, ರೈಲು ಮತ್ತು ವಿಮಾನ ನಿಲ್ದಾಣ) ಎಂಬ ಮಂತ್ರವನ್ನು ಸಂಪರ್ಕದಂತಹ ಕೆಲಸ ಮಾಡುತ್ತಿದೆ, ಈಶಾನ್ಯ ರಾಜ್ಯಗಳನ್ನು ಮುಖ್ಯವಾಹಿನಿಗೆ ತಂದಿದೆ ಎಂದು ಅವರು ಹೇಳಿದರು.

ಈಗ ಬಿಜೆಪಿ ವಿರುದ್ಧ ಅಲ್ಪಸಂಖ್ಯಾತರಲ್ಲಿ ಪ್ರತಿಪಕ್ಷಗಳು ಹುಟ್ಟುಹಾಕಿರುವ ಭಯವೂ ಮಾಯವಾಗುತ್ತಿದೆ ಮತ್ತು ಬಹಿರಂಗವಾಗುತ್ತಿದೆ ಎಂದರು. “ಗೋವಾ ಮತ್ತು ನಾಗಾಲ್ಯಾಂಡ್‌ನಲ್ಲಿ ಅಲ್ಪಸಂಖ್ಯಾತರು ಬಿಜೆಪಿಯನ್ನು ಬೆಂಬಲಿಸಿದ್ದಾರೆ, ಇತರ ರಾಜ್ಯಗಳಲ್ಲಿಯೂ ಬಿಜೆಪಿಯನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಾರೆ. ಬಿಜೆಪಿ ವಿರುದ್ಧ ಕೆಲವು ಪಕ್ಷಗಳು ತಮ್ಮನ್ನು ಹೇಗೆ ದಾರಿ ತಪ್ಪಿಸಿದವು ಎಂಬುದನ್ನು ಅವರು ಅರಿತುಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

SCROLL FOR NEXT