ಅನುರಾಗ್ ಠಾಕೂರ್ 
ದೇಶ

'ಪೆಗಾಸಸ್' ಅವರ ಮನಸ್ಸಿನಲ್ಲಿದೆ: ರಾಹುಲ್ ಗಾಂಧಿ ಆರೋಪದ ಬಗ್ಗೆ ಅನುರಾಗ್ ಠಾಕೂರ್ ತೀವ್ರ ಕಿಡಿ

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ‘ಪೆಗಾಸಸ್’ ವಿಷಯದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ತೀವ್ರವಾಗಿ ಕಿಡಿ ಕಾರಿದ್ದಾರೆ.

ನವದೆಹಲಿ: ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ‘ಪೆಗಾಸಸ್’ ವಿಷಯದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ ತೀವ್ರವಾಗಿ ಕಿಡಿ ಕಾರಿದ್ದಾರೆ.

ಕೇಂಬ್ರಿಜ್ ವಿಶ್ವವಿದ್ಯಾಲಯದ ಉಪನ್ಯಾಸದ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಪೆಗಾಸಸ್ ಬೇಹುಗಾರಿಕಾ ಕುತಂತ್ರಾಂಶದ ವಿವಾದವನ್ನು ಪ್ರಸ್ತಾಪಿಸಿದ್ದರು.

ತಾವೂ ಸೇರಿದಂತೆ ಭಾರತದ ಹಲವು ರಾಜಕಾರಣಿಗಳ ಮೊಬೈಲ್‌ಗಳಲ್ಲಿ ಪೆಗಾಸಸ್ ಸಾಫ್ಟ್‌ವೇರ್ ಅನ್ನು ಸ್ಥಾಪಿಸಲಾಗಿತ್ತು. ಗುಪ್ತಚರ ಅಧಿಕಾರಿಗಳು ನನ್ನನ್ನು ಕರೆದು, ನೀವು ಪೋನ್‌ನಲ್ಲಿ ಮಾತನಾಡುವಾಗ ದಯವಿಟ್ಟು ಜಾಗರೂಕರಾಗಿರಿ. ನಿಮ್ಮ ಕರೆಗಳನ್ನು ನಾವು ರೆಕಾರ್ಡ್ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಅನುರಾಗ್ ಠಾಕೂರ್ ಅವರು ತೀವ್ರವಾಗಿ ಕಿಡಿಕಾರಿದ್ದು, ಆಧಾರರಹಿತ ಆರೋಪಗಳನ್ನು ಮಾಡುವುದು ಮತ್ತು ವಿದೇಶಗಳಲ್ಲಿ ಭಾರತಕ್ಕೆ 'ಮಾನಹಾನಿ' ಮಾಡುವ ಗುಣವನ್ನು ಬೆಳೆಸಿಕೊಂಡಿದ್ದಾರೆ. ಪೆಗಾಸಸ್ ಅವರ ಮನಸ್ಸಿನಲ್ಲಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಿಶ್ವದಾದ್ಯಂತ ಭಾರತದ ಬಗ್ಗೆ ಗೌರವ ಹೆಚ್ಚಿದೆ. ಇದನ್ನು ದೊಡ್ಡ ನಾಯಕರು ಹೇಳುತ್ತಿದ್ದಾರೆ, ಪ್ರಧಾನಿ ಮೋದಿ ಬಗ್ಗೆ ಇಟಲಿ ಪ್ರಧಾನಿ ಹೇಳಿದ್ದನ್ನ ರಾಹುಲ್ ಗಾಂಧಿ ಕೇಳಬೇಕು ಎಂದು ಹೇಳಿದ್ದಾರೆ.

ಮೂರು ರಾಜ್ಯಗಳ ಚುನಾವಣ ಫಲಿತಾಂಶವು ಕಾಂಗ್ರೆಸನ್ನು ಮತ್ತೊಮ್ಮೆ ಅಳಿಸಿಹಾಕಿದೆ ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಜನಾದೇಶವನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಮತ್ತು ನಿನ್ನೆಯ ಫಲಿತಾಂಶವು ಜನರು ಪ್ರಧಾನಿ ಮೋದಿಯನ್ನು ನಂಬುತ್ತಾರೆ ಎಂಬುದನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT