ಕಿರಣ್ ರಿಜಿಜು 
ದೇಶ

ಭಾರತದ ನ್ಯಾಯಾಂಗವನ್ನು ಪ್ರಶ್ನಿಸುವಂತಿಲ್ಲ: ಕೇಂದ್ರ ಸಚಿವ ಕಿರಣ್ ರಿಜಿಜು

ಪ್ರತಿಪಕ್ಷಗಳು ಭಾರತದ ನ್ಯಾಯಾಂಗದ ಆಶಯಗಳನ್ನು ಅನುಮಾನಿಸುವ ಮೂಲಕ ದೇಶದ ಪ್ರತಿಷ್ಠೆಯನ್ನು ಹಾಳುಮಾಡಲು ಯತ್ನಿಸುತ್ತಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಶನಿವಾರ ಆರೋಪಿಸಿದ್ದಾರೆ.

ಭುವನೇಶ್ವರ: ಪ್ರತಿಪಕ್ಷಗಳು ಭಾರತದ ನ್ಯಾಯಾಂಗದ ಆಶಯಗಳನ್ನು ಅನುಮಾನಿಸುವ ಮೂಲಕ ದೇಶದ ಪ್ರತಿಷ್ಠೆಯನ್ನು ಹಾಳುಮಾಡಲು ಯತ್ನಿಸುತ್ತಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಶನಿವಾರ ಆರೋಪಿಸಿದ್ದಾರೆ.

ಪೂರ್ವ ರಾಜ್ಯಗಳ ಕೇಂದ್ರ ಸರ್ಕಾರದ ವಕೀಲರ ಮೊದಲ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ರಿಜಿಜು, ಭಾರತೀಯ ನ್ಯಾಯಾಂಗವನ್ನು ಪ್ರಶ್ನಿಸುವಂತಿಲ್ಲ. ವಿಶೇಷವಾಗಿ ನ್ಯಾಯಾಧೀಶರ ನಿರ್ಧಾರವನ್ನು ಸಾರ್ವಜನಿಕ ಪರಿಶೀಲನೆಗೆ ಒಳಪಡಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

"ಕೆಲವೊಮ್ಮೆ, ಭಾರತೀಯ ನ್ಯಾಯಾಂಗವು ಬಿಕ್ಕಟ್ಟಿನಲ್ಲಿದೆ ಎಂದು ಜಗತ್ತಿಗೆ ತಿಳಿಸಲು ದೇಶದ ಒಳಗೆ ಮತ್ತು ಹೊರಗಿನಿಂದ ಪ್ರಯತ್ನಗಳು ನಡೆದಿವೆ. ಈ ಮೂಲಕ ಭಾರತದ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ ಎಂಬ ಸಂದೇಶ ನೀಡಲಾಗಿದೆ. ಆದರೆ ಇದು ಉದ್ದೇಶಪೂರ್ವಕವಾಗಿದ್ದು, ಕೆಲವು ಗುಂಪುಗಳು ದೇಶದ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿವೆ ” ಎಂದು ಕೇಂದ್ರ ಸಚಿವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತೀಯ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ನೀಡಿದ ಹೇಳಿಕೆಗೆ ಕೇಂದ್ರ ಕಾನೂನು ಸಚಿವರು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT