ಪ್ರಾತಿನಿಧಿಕ ಚಿತ್ರ 
ದೇಶ

ತಾನು ಪ್ರೀತಿಯಿಂದ ಸಾಕಿದ್ದ ಹುಂಜಗಳಿಗೆ ಪೊಲೀಸ್ ರಕ್ಷಣೆ ಕೋರಿದ ಛತ್ತೀಸ್‌ಗಢದ ಮಹಿಳೆ

ಛತ್ತೀಸ್‌ಗಢದ ರತನ್‌ಪುರದ ಜಾಂಕಿ ಬಾಯಿ ಬಿಜ್ವಾರ್ ಅವರಿಗೆ ವಿಶೇಷವಾಗಿ ಹುಂಜಗಳೆಂದರೆ ತುಂಬಾ ಪ್ರೀತಿ. ಆ ಪ್ರೀತಿ ಎಷ್ಟು ಪ್ರಬಲವಾಗಿದೆಯೆಂದರೆ, ತನ್ನ ನೆರೆಹೊರೆಯವರು ಕೋಳಿಗಳನ್ನು ಕಳ್ಳತನ ಮಾಡುವುದರಿಂದಾಗಿ ತಾನು ಸಾಕಿರುವ ಹುಂಜಗಳಿಗೆ ಪೊಲೀಸ್ ರಕ್ಷಣೆಯನ್ನು ಕೋರಿದ್ದಾರೆ.

ರಾಯಪುರ: ಛತ್ತೀಸ್‌ಗಢದ ರತನ್‌ಪುರದ ಜಾಂಕಿ ಬಾಯಿ ಬಿಜ್ವಾರ್ ಅವರಿಗೆ ವಿಶೇಷವಾಗಿ ಹುಂಜಗಳೆಂದರೆ ತುಂಬಾ ಪ್ರೀತಿ. ಆ ಪ್ರೀತಿ ಎಷ್ಟು ಪ್ರಬಲವಾಗಿದೆಯೆಂದರೆ, ತನ್ನ ನೆರೆಹೊರೆಯವರು ಕೋಳಿಗಳನ್ನು ಕಳ್ಳತನ ಮಾಡುವುದರಿಂದಾಗಿ ತಾನು ಸಾಕಿರುವ ಹುಂಜಗಳಿಗೆ ಪೊಲೀಸ್ ರಕ್ಷಣೆಯನ್ನು ಕೋರಿದ್ದಾರೆ.

ರಾಯ್‌ಪುರದಿಂದ ಪೂರ್ವಕ್ಕೆ 130 ಕಿಮೀ ದೂರದಲ್ಲಿರುವ ಬಿಲಾಸ್‌ಪುರದ ರತನ್‌ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಜಾಂಕಿ ಲಿಖಿತ ದೂರು ದಾಖಲಿಸಿದ್ದು, ತನ್ನ ಕುಟುಂಬವು ಕೋಳಿಗಳನ್ನು ಪ್ರೀತಿಯಿಂದ ಸಾಕುತ್ತಿದೆ ಎಂದು ವಿವರಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ನನ್ನ ನೆರೆಹೊರೆಯವರಾದ ಬುಗಲ್ ಮತ್ತು ದುರ್ಗಾ ಎಂಬುವವರು ದುರುದ್ದೇಶಪೂರಿತ ಮನಸ್ಥಿತಿಯೊಂದಿಗೆ ತಾನು ಸಾಕಿದ್ದ ಹುಂಜವನ್ನು ತೆಗೆದುಕೊಂಡು ಹೋಗಲು ಯತ್ನಿಸುತ್ತಿದ್ದಾರೆ. 'ಒಮ್ಮೆ, ಎರಡು ಕೆಜಿ ತೂಕದ ನನ್ನ ಕಂದು ಬಣ್ಣದ ಹುಂಜವನ್ನು ತಿನ್ನಲು ತೆಗೆದುಕೊಂಡು ಹೋಗುವುದನ್ನು ನೋಡಿದೆ' ಎಂದು ದೂರಿದ್ದಾರೆ.

'ನಾನು ಅವರ ಮನೆಗೆ ಧಾವಿಸಿದೆ. ಕೋಳಿಯನ್ನು ಹಿಂತಿರುಗಿಸಲು ಅವರೊಂದಿಗೆ ಜಗಳವಾಡಬೇಕಾಯಿತು. ಕೋಳಿ ಗಂಭೀರವಾಗಿ ಗಾಯಗೊಂಡಿರುವುದನ್ನು ನೋಡಿ ನನಗೆ ಆಘಾತವಾಯಿತು. ನನಗೆ ತುಂಬಾ ನೋವಾಗಿದೆ ಮತ್ತು ತಕ್ಷಣ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದೆ' ಎಂದು ಅವರು ಹೇಳಿದರು.

ಮೊದಲು ಎರಡು ನೆರೆಹೊರೆಯವರ ನಡುವಿನ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸುತ್ತೇವೆ. ಮತ್ತು ಅವರು ಮಾತುಕತೆಗೆ ಸಿದ್ಧರಿಲ್ಲದಿದ್ದರೆ, ನಾವು ಕೆಲವು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಯೋಚಿಸುತ್ತೇವೆ ಎಂದು ರತನ್‌ಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT