ಬಚ್ಚು ಕಡು 
ದೇಶ

ಬೀದಿ ನಾಯಿಗಳನ್ನು 'ಅಸ್ಸಾಂಗೆ ಕಳುಹಿಸಿ, ಅಲ್ಲಿನ ಜನರು ಬಹಳ ಉತ್ಸಾಹದಿಂದ ತಿನ್ನುತ್ತಾರೆ: ಮಹಾರಾಷ್ಟ್ರ ಶಾಸಕ

ಮಹಾರಾಷ್ಟ್ರದ ಬೀದಿ ನಾಯಿಗಳನ್ನು ಅಸ್ಸಾಂಗೆ ಕಳುಹಿಸಬೇಕು. ಅಲ್ಲಿನ ಜನರು ನಾಯಿಗಳನ್ನು ಕೊಂದು ಬಹಳ ಉತ್ಸಾಹದಿಂದ ತಿನ್ನುತ್ತಾರೆ ಎಂದು ಮಹಾರಾಷ್ಟ್ರದ ಶಾಸಕ ಮತ್ತು ಪ್ರಹಾರ್ ಜನಶಕ್ತಿ ಪಕ್ಷದ ಮುಖ್ಯಸ್ಥ ಬಚ್ಚು ಕಾಡು ಹೇಳಿದ್ದು ಈ ಹೇಳಿಕೆ ಇದೀಗ ಕೋಲಾಹಲ ಎಬ್ಬಿಸಿದೆ.

ಮುಂಬೈ: ಮಹಾರಾಷ್ಟ್ರದ ಬೀದಿ ನಾಯಿಗಳನ್ನು ಅಸ್ಸಾಂಗೆ ಕಳುಹಿಸಬೇಕು. ಅಲ್ಲಿನ ಜನರು ನಾಯಿಗಳನ್ನು ಕೊಂದು ಬಹಳ ಉತ್ಸಾಹದಿಂದ ತಿನ್ನುತ್ತಾರೆ ಎಂದು ಮಹಾರಾಷ್ಟ್ರದ ಶಾಸಕ ಮತ್ತು ಪ್ರಹಾರ್ ಜನಶಕ್ತಿ ಪಕ್ಷದ ಮುಖ್ಯಸ್ಥ ಬಚ್ಚು ಕಾಡು ಹೇಳಿದ್ದು ಈ ಹೇಳಿಕೆ ಇದೀಗ ಕೋಲಾಹಲ ಎಬ್ಬಿಸಿದೆ.

ಬೀದಿನಾಯಿಗಳು ಮತ್ತು ಅವುಗಳಿಂದಾಗುವ ಸಮಸ್ಯೆಗಳ ಕುರಿತು ವಿಧಾನಸೌಧದಲ್ಲಿ ಚರ್ಚೆ ನಡೆಯುತ್ತಿತ್ತು. ಇಂತಹ ಸಂದರ್ಭದಲ್ಲಿ ಶಾಸಕ ಬಚ್ಚು ಕಾಡು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಇತರ ಶಾಸಕರಾದ ಪ್ರತಾಪ್ ಸರ್ನಾಯಕ್ ಮತ್ತು ಅತುಲ್ ಭಟ್ಕಳಕರ್ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಅಸ್ಸಾಂನಲ್ಲಿ ಬೀದಿ ನಾಯಿಗಳಿಗೆ ಭಾರಿ ಬೇಡಿಕೆ ಇದೆ ಎಂದು ಮಹಾರಾಷ್ಟ್ರ ಶಾಸಕ ಬಚ್ಚು ಕಡು ಹೇಳಿದ್ದಾರೆ. ಅಲ್ಲಿ ನಾಯಿಗೆ 8 ಸಾವಿರ ರೂಪಾಯಿ ಬೆಲೆ ಇದೆ. ಇದರೊಂದಿಗೆ ರಾಜ್ಯದಲ್ಲಿನ ಬೀದಿ ನಾಯಿಗಳ ಸಂಖ್ಯೆಯೂ ನಿಯಂತ್ರಣಕ್ಕೆ ಬರಲಿದೆ. ಹೀಗಾಗಿ ನಾಯಿಗಳನ್ನು ಅಸ್ಸಾಂಗೆ ಕಳುಹಿಸಬೇಕು. ಮೊದಲು ಈ ಪ್ರಯೋಗವನ್ನು ನಗರದಲ್ಲಿ ನಡೆಸಬೇಕು ಎಂದರು. 

ಬಚ್ಚು ಕಡು ಹೇಳಿಕೆಗೆ ತೀವ್ರ ಟೀಕೆ ಎದುರಾಗಿದ್ದು ಈ ಹೇಳಿಕೆಯನ್ನು ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಮತ್ತು ಪ್ರಾಣಿ ಪ್ರೇಮಿಗಳು ತೀವ್ರವಾಗಿ ಖಂಡಿಸಿದ್ದಾರೆ. ಶಾಸಕರ ಹೇಳಿಕೆ ತೀರಾ ಅವಹೇಳನಕಾರಿಯಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT