ಆರ್‌ಜೆಡಿ ಶಾಸಕ ತೇಜ್ ಪ್ರತಾಪ್ ಅವರು ಪಾಟ್ನಾದಲ್ಲಿ ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ಭೇಟಿಯ ಸಂದರ್ಭದಲ್ಲಿ ರಾಬ್ರಿ ದೇವಿ ಅವರ ನಿವಾಸದಲ್ಲಿದ್ದರು. 
ದೇಶ

ಲಾಲು ತಾವೇ ಬಿತ್ತಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ: ರಾಬ್ರಿ ದೇವಿ ನಿವಾಸದಲ್ಲಿ ಸಿಬಿಐ ತಂಡದ ಕುರಿತು ಬಿಜೆಪಿ!

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧದ ಪ್ರಕರಣಗಳಲ್ಲಿ ಕೇಂದ್ರೀಯ ತನಿಖಾ ದಳವು 'ಸ್ವತಂತ್ರ ಸಂಸ್ಥೆಯಾಗಿ ತನ್ನ ಕೆಲಸ ಮಾಡುತ್ತಿದೆ' ಮತ್ತು ಲಾಲು ಪ್ರಸಾದ್ ಅವರು ತಾವು ಬಿತ್ತಿದ್ದನ್ನು ಕೊಯ್ಲು ಮಾಡುತ್ತಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕರು ಸೋಮವಾರ ಪ್ರತಿಪಾದಿಸಿದ್ದಾರೆ.

ಪಾಟ್ನಾ: ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧದ ಪ್ರಕರಣಗಳಲ್ಲಿ ಕೇಂದ್ರೀಯ ತನಿಖಾ ದಳವು 'ಸ್ವತಂತ್ರ ಸಂಸ್ಥೆಯಾಗಿ ತನ್ನ ಕೆಲಸ ಮಾಡುತ್ತಿದೆ' ಮತ್ತು ಲಾಲು ಪ್ರಸಾದ್ ಅವರು ತಾವು ಬಿತ್ತಿದ್ದನ್ನು ಕೊಯ್ಲು ಮಾಡುತ್ತಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕರು ಸೋಮವಾರ ಪ್ರತಿಪಾದಿಸಿದ್ದಾರೆ.

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ನಿವಾಸದ ಮೇಲೆ ದಾಳಿ ನಡೆಸಿದ್ದು, ಸೋಮವಾರ ವಿಚಾರಣೆ ನಡೆಸುತ್ತಿದ್ದಾರೆ.  

ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿರುವ ಆದರೆ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕೇಸರಿ ಪಕ್ಷದ ನಾಯಕರು, ಲಾಲು ಪ್ರಸಾದ್ ಅವರ ಪತ್ನಿ ಮತ್ತು ಮಾಜಿ ಸಿಎಂ ರಾಬ್ರಿ ದೇವಿ ಅವರ ನಿವಾಸಕ್ಕೆ ಸಿಬಿಐ ತಂಡ ತಲುಪಿರುವ ಕುರಿತಾದ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರಿಸಿದರು.

'ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣದ 'ಹೆಚ್ಚಿನ ತನಿಖೆ'ಗೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ನಿವಾಸಕ್ಕೆ ಸಿಬಿಐ ತಂಡವು ಭೇಟಿ ನೀಡಿದೆ. ಯಾವುದೇ ಹುಡುಕಾಟ ಅಥವಾ ದಾಳಿ ನಡೆಯುತ್ತಿಲ್ಲ' ಎಂದು ಅವರು ಹೇಳಿದರು.

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ತಮ್ಮ ಕುಟುಂಬಕ್ಕೆ ಜಮೀನನ್ನು ಉಡುಗೊರೆಯಾಗಿ ನೀಡಿದವರು ಅಥವಾ ಮಾರಾಟ ಮಾಡಿದ ಕುಟುಂಬಗಳಿಗೆ ರೈಲ್ವೇಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪವಿದೆ.

ಸಿಬಿಐ ಜೊತೆ ಲಾಲು ಪ್ರಸಾದ್ ಅವರ ಸಂಬಂಧವು ಬಹಳ ಹಿಂದಿನದು. ಮೇವು ಹಗರಣದ ಪ್ರಕರಣಗಳು ಅವರು ಬಿಜೆಪಿಗೆ ಬರುವುದಕ್ಕಿಂತ ಮುಂಚೆಯೇ ದಾಖಲಾಗಿದ್ದವು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ರಾಜ್ಯ ಸಚಿವ ನಿತಿನ್ ನಬಿನ್ ಹೇಳಿದ್ದಾರೆ.

ಅವರು ಕೇಂದ್ರದಲ್ಲಿ ಯುನೈಟೆಡ್ ಫ್ರಂಟ್ ಆಡಳಿತ ನಡೆಸುತ್ತಿದ್ದಾಗ ಮೇವು ಹಗರಣದ ಪ್ರಕರಣಗಳು ದಾಖಲಾಗಿದ್ದವು. ದೂರುದಾರರಲ್ಲಿ ಈಗ ಅವರ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ್ ತಿವಾರಿ ಮತ್ತು ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸೇರಿದ್ದಾರೆ.

ಬಿಜೆಪಿಯ ಮತ್ತೋರ್ವ ನಾಯಕ ಮತ್ತು ಮಾಜಿ ಸಚಿವ ಜಿಬೇಶ್ ಕುಮಾರ್ ಮಿಶ್ರಾ ಮಾತನಾಡಿ, '2013 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಅವರನ್ನು ಮೊದಲು ದೋಷಿ ಎಂದು ಘೋಷಿಸಲಾಯಿತು. ಸಿಬಿಐ ಸ್ವತಂತ್ರ ಸಂಸ್ಥೆಯಾಗಿದ್ದು, ತನ್ನ ಕೆಲಸವನ್ನು ಮಾಡುತ್ತಿದೆ. ರಾಜಕೀಯ ದ್ವೇಷದ ಆರೋಪ ನಿರಾಧಾರ. ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಅವರು ಬಿತ್ತಿದ್ದನ್ನು (ಜೈಸಿ ಕರ್ನಿ ವೈಸಿ ಭರ್ನಿ) ಕೊಯ್ಯುತ್ತಿದ್ದಾರೆ' ಎಂದು ಬಿಜೆಪಿ ನಾಯಕ ಹೇಳಿದರು.

ಉದ್ಯೋಗ ಹಗರಣ ಪ್ರಕರಣದಲ್ಲಿ ಸಿಬಿಐ ಈಗಾಗಲೇ ತನ್ನ ಚಾರ್ಜ್ ಶೀಟ್ ಸಲ್ಲಿಸಿದೆ. ವಿಶೇಷ ನ್ಯಾಯಾಲಯವು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರು ಮತ್ತು ಇತರರನ್ನು ಒಳಗೊಂಡಂತೆ ಮಾರ್ಚ್ 15 ರಂದು ಆರೋಪಿಗಳಿಗೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಪಾದಿತ ಹಗರಣದ ಕುರಿತು ಹೆಚ್ಚಿನ ತನಿಖೆಯನ್ನು ಸಂಸ್ಥೆ ಕೈಗೆತ್ತಿಕೊಂಡಿದೆ. ಪ್ರಕರಣದ ಮುಂದಿನ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ತಂಡದ ಭೇಟಿ ಇದಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT