ಅತಿಶಿ ಮತ್ತು ಸೌರಭ್ ಭಾರದ್ವಾಜ್ 
ದೇಶ

ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್ ನೇಮಕ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಮ್ ಆದ್ಮಿ ಪಕ್ಷದ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ದೆಹಲಿಯ ನೂತನ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಮ್ ಆದ್ಮಿ ಪಕ್ಷದ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ದೆಹಲಿಯ ನೂತನ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಈ ಇಬ್ಬರು ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ದಿನಾಂಕದಿಂದ ಈ ಆದೇಶ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಅತಿಶಿ, ಸೌರಭ್ ಭಾರದ್ವಾಜ್ ಅವರನ್ನು ದೆಹಲಿ ಸಂಪುಟಕ್ಕೆ ನೇಮಕ ಮಾಡುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್‌ಗೆ ಶಿಫಾರಸು ಮಾಡಿದ್ದರು. ಅದನ್ನು ಲೆಫ್ಟಿನೆಂಟ್ ಗವರ್ನರ್‌ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಎಎಪಿ ಸಚಿವರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಇಂದು ಅಂಗೀಕರಿಸಿದ್ದು, ನೂತನ ಸಚಿವರನ್ನಾಗಿ ಅತಿಶಿ, ಸೌರಭ್ ಭಾರದ್ವಾಜ್ ಅವರನ್ನು ನೇಮಕ ಮಾಡಿದ್ದಾರೆ.

ದೆಹಲಿಯ ಕಲ್ಕಾಜಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅತಿಶಿ ಅವರು, ಸಿಸೋಡಿಯಾ ಅವರ ಶಿಕ್ಷಣ ತಂಡದ ಪ್ರಮುಖ ಸದಸ್ಯರಾಗಿದ್ದಾರೆ.

ಆತಿಶಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಪೂರ್ವ ದೆಹಲಿ ಕ್ಷೇತ್ರದಿಂದ ಬಿಜೆಪಿಯ ಗೌತಮ್ ಗಂಭೀರ್ ವಿರುದ್ಧ ಸೋತಿದ್ದರು.

ಇನ್ನು ಪಕ್ಷದ ರಾಷ್ಟ್ರೀಯ ವಕ್ತಾರರಾದ ಭಾರದ್ವಾಜ್ ಅವರು ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!