ಅತಿಶಿ ಮತ್ತು ಸೌರಭ್ ಭಾರದ್ವಾಜ್ 
ದೇಶ

ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್ ನೇಮಕ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಮ್ ಆದ್ಮಿ ಪಕ್ಷದ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ದೆಹಲಿಯ ನೂತನ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಮ್ ಆದ್ಮಿ ಪಕ್ಷದ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ದೆಹಲಿಯ ನೂತನ ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಈ ಇಬ್ಬರು ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ದಿನಾಂಕದಿಂದ ಈ ಆದೇಶ ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಅತಿಶಿ, ಸೌರಭ್ ಭಾರದ್ವಾಜ್ ಅವರನ್ನು ದೆಹಲಿ ಸಂಪುಟಕ್ಕೆ ನೇಮಕ ಮಾಡುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್‌ಗೆ ಶಿಫಾರಸು ಮಾಡಿದ್ದರು. ಅದನ್ನು ಲೆಫ್ಟಿನೆಂಟ್ ಗವರ್ನರ್‌ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಎಎಪಿ ಸಚಿವರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಇಂದು ಅಂಗೀಕರಿಸಿದ್ದು, ನೂತನ ಸಚಿವರನ್ನಾಗಿ ಅತಿಶಿ, ಸೌರಭ್ ಭಾರದ್ವಾಜ್ ಅವರನ್ನು ನೇಮಕ ಮಾಡಿದ್ದಾರೆ.

ದೆಹಲಿಯ ಕಲ್ಕಾಜಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅತಿಶಿ ಅವರು, ಸಿಸೋಡಿಯಾ ಅವರ ಶಿಕ್ಷಣ ತಂಡದ ಪ್ರಮುಖ ಸದಸ್ಯರಾಗಿದ್ದಾರೆ.

ಆತಿಶಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಪೂರ್ವ ದೆಹಲಿ ಕ್ಷೇತ್ರದಿಂದ ಬಿಜೆಪಿಯ ಗೌತಮ್ ಗಂಭೀರ್ ವಿರುದ್ಧ ಸೋತಿದ್ದರು.

ಇನ್ನು ಪಕ್ಷದ ರಾಷ್ಟ್ರೀಯ ವಕ್ತಾರರಾದ ಭಾರದ್ವಾಜ್ ಅವರು ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT