ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ವಲಸಿಗರ ಮೇಲೆ ದಾಳಿ ಕುರಿತು ನಕಲಿ ವಿಡಿಯೋ ಶೇರ್ ಮಾಡುತ್ತಿದ್ದ ಬಿಹಾರ ವ್ಯಕ್ತಿಯ ಬಂಧನ

ತಿರುಪ್ಪೂರ್ ಮತ್ತು ತಮಿಳುನಾಡಿನ ಇತರ ಭಾಗಗಳಲ್ಲಿ ಬಿಹಾರ ವಲಸೆ ಕಾರ್ಮಿಕರ ಮೇಲೆ ದಾಳಿಯ ನಕಲಿ ವಿಡಿಯೊಗಳನ್ನು ಶೇರ್ ಮಾಡುತ್ತಿದ್ದ ಬಿಹಾರ ಮೂಲದ ರೂಪೇಶ್ ಕುಮಾರ್ ಎಂಬಾತನನ್ನು ತಿರುಪ್ಪೂರ್ ಜಿಲ್ಲೆಯ ಸೈಬರ್ ಕ್ರೈಂ...

ತಿರುಪ್ಪೂರ್: ತಿರುಪ್ಪೂರ್ ಮತ್ತು ತಮಿಳುನಾಡಿನ ಇತರ ಭಾಗಗಳಲ್ಲಿ ಬಿಹಾರ ವಲಸೆ ಕಾರ್ಮಿಕರ ಮೇಲೆ ದಾಳಿಯ ನಕಲಿ ವಿಡಿಯೊಗಳನ್ನು ಶೇರ್ ಮಾಡುತ್ತಿದ್ದ ಬಿಹಾರ ಮೂಲದ ರೂಪೇಶ್ ಕುಮಾರ್ ಎಂಬಾತನನ್ನು ತಿರುಪ್ಪೂರ್ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರ ತಂಡ ಮಂಗಳವಾರ ಬಂಧಿಸಿದೆ.

ಪೊಲೀಸ್ ಮೂಲಗಳ ಪ್ರಕಾರ, ಬಿಹಾರದ ನಿವಾಸಿ ರೂಪೇಶ್ ಕುಮಾರ್ ಅವರು ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ ಗಳಲ್ಲಿ ಕೆಲಸ ಮಾಡುವ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸುತ್ತಿರುವ ಸುಳ್ಳು ವಿಡಿಯೊಗಳನ್ನು ಸೃಷ್ಟಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಈ ಸಂಬಂಧ ಸೈಬರ್ ಕ್ರೈಮ್ ಪೊಲೀಸರು ರೂಪೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದರು ಮತ್ತು ವಿಡಿಯೊಗಳನ್ನು ತೆಗೆದುಹಾಕುವಂತೆ ಕೇಳಿಕೊಂಡಿದ್ದರು. ಆದರೆ ರೂಪೇಶ್ ಕುಮಾರ್ ಮತ್ತಷ್ಟು ವಿಡಿಯೊಗಳನ್ನು ಹಂಚಿಕೊಂಡಿದ್ದರಿಂದ ಸೈಬರ್ ಕ್ರೈಂ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಂಧನ ಭೀತಿಯಿಂದ ತೆಲಂಗಾಣದಲ್ಲಿ ತಲೆಮರೆಸಿಕೊಂಡಿದ್ದ ರೂಪೇಶ್ ನನ್ನು ಮೊಬೈಲ್ ಟ್ರ್ಯಾಕಿಂಗ್ ತಂತ್ರಜ್ಞಾನ ಬಳಸಿ ತಮಿಳುನಾಡು ಪೊಲೀಸರು ಬಂಧಿಸಿದ್ದು, ತಮಿಳುನಾಡಿಗೆ ಕರೆದೊಯ್ಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!