ಸಾಂದರ್ಭಿಕ ಚಿತ್ರ 
ದೇಶ

ಕಾಂಚೀಪುರಂ: ತರಬೇತುದಾರನಿಂದ ಅತ್ಯಾಚಾರ ಯತ್ನ; ತಪ್ಪಿಸಿಕೊಳ್ಳಲು ಮಹಡಿಯಿಂದ ಜಿಗಿದ ಯುವ ಆಟಗಾರ್ತಿ

ಅತ್ಯಾಚಾರಕ್ಕೆ ಯತ್ನಿಸಿದ ತರಬೇತುದಾರನಿಂದ ತಪ್ಪಿಸಿಕೊಳ್ಳಲು ಆಟಗಾರ್ತಿಯೊಬ್ಬರು ಮೊದಲ ಮಹಡಿಯಿಂದ ಜಿಗಿದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಕಾಂಚಿಪುರಂ: ಅತ್ಯಾಚಾರಕ್ಕೆ ಯತ್ನಿಸಿದ ತರಬೇತುದಾರನಿಂದ ತಪ್ಪಿಸಿಕೊಳ್ಳಲು ಆಟಗಾರ್ತಿಯೊಬ್ಬರು ಮೊದಲ ಮಹಡಿಯಿಂದ ಜಿಗಿದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ಕಾಂಚಿಪುರಂನಲ್ಲಿ ಭಾನುವಾರ ಈ ಘಟನೆ ನಡೆದಿದ್ದು, 19 ವರ್ಷದ ಸ್ಕ್ವಾಷ್ ಆಟಗಾರ್ತಿಯೊಬ್ಬರು ತರಬೇತುದಾರ ತನ್ನ ಮೇಲೆ ಯತ್ನಿಸಿದ ನಂತರ ಮನೆಯ ಮೊದಲ ಮಹಡಿಯಿಂದ ಜಿಗಿದಿದ್ದಾರೆ.

ಆರೋಪಿ ಮುರುಗೇಶನ್ (48 ವರ್ಷ) ಕಾಂಚೀಪುರಂ ರೈಲು ನಿಲ್ದಾಣ ರಸ್ತೆಯಲ್ಲಿರುವ ತಮಿಳುನಾಡು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರದ ಕ್ರೀಡಾಂಗಣದಲ್ಲಿ ತರಬೇತುದಾರ ಎಂದು ಪೊಲೀಸರು ತಿಳಿಸಿದ್ದಾರೆ. ಸರ್ವೈವರ್ ಕ್ರೀಡಾಂಗಣದಲ್ಲಿ ಕಾಲೇಜು ವಿದ್ಯಾರ್ಥಿನಿ ತರಬೇತಿ ಪಡೆಯುತ್ತಿದ್ದರು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವಂತೆ, ''ಸ್ಟೇಡಿಯಂ ಬಳಿಯಿರುವ ಅವರ ಮನೆಯಲ್ಲಿ ಆಕೆಯ ಪ್ರಮಾಣಪತ್ರಗಳಲ್ಲಿ ಒಂದನ್ನು ಇಟ್ಟುಕೊಂಡಿದ್ದೇನೆ.  ಅದನ್ನು ಮನೆಗೆ ಬಂದು ತೆಗೆದುಕೊಂಡು ಹೋಗುವಂತೆ ಹೇಳಿದ್ದಾನೆ. ಹೀಗಾಗಿ ವಿದ್ಯಾರ್ಥಿನಿ ಆತನ ಮನೆಗೆ ಹೋಗಿದ್ದಾಳೆ. 

ಮುರುಗೇಶನ ಮನೆಗೆ ಹೋದಾಗ ಆತ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದ. ಈ ವೇಳೆ ಆತನಿಂದ ಪಾರಾಗಲು ಮುರುಗೇಶನ್ ನ ಮನೆಯ ಮೊದಲ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಪರಾರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಅಕ್ಕಪಕ್ಕದ ಜನರನ್ನು ಎಚ್ಚರಿಸಿ ವಿಷ್ಣು ಕಂಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಸ್ತುತ ಪೊಲೀಸ್ ತಂಡ ಭಾನುವಾರ ಮುರುಗೇಶನ್ ನನ್ನು ಬಂಧಿಸಿ ಕಾಂಚೀಪುರಂ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸ್ ತನಿಖೆ ವೇಳೆ ಕೋಚ್ ಮುರುಗೇಶನ್ ಈ ಹಿಂದೆಯೂ ಕೂಡ ಇತರ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಎಂಬುದು ತಿಳಿದುಬಂದಿದೆ. ಪ್ರಸ್ತುತ ಕೋಚ್ ಮುರುಗೇಶನ್ ವಿರುದ್ಧ ಅತ್ಯಾಚಾರ ಯತ್ನ ಮತ್ತು ತಮಿಳುನಾಡು ಮಹಿಳೆಯರ ಕಿರುಕುಳ ತಡೆ ಕಾಯ್ದೆಯ ಸೆಕ್ಷನ್ 4 ರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಈ ಹಿಂದೆ ಸರ್ಕಾರಿ ಕ್ರೀಡಾ ಅಕಾಡೆಮಿಯಲ್ಲಿ ತರಬೇತುದಾರರಾಗಿದ್ದ ಮುರುಗೇಶನ್ ಅವರನ್ನು ಕೆಲವು ತಿಂಗಳ ಹಿಂದೆ ಅಮಾನತುಗೊಳಿಸಲಾಗಿತ್ತು. ನಂತರ ಅದನ್ನು ರದ್ದುಗೊಳಿಸಲಾಗಿತ್ತು ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT