ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಕರ್ನಾಟಕದಲ್ಲಿ ಕೋಟ್ಯಾಂತರ ರೂ. ಸಿಕ್ಕರೂ ಬಿಜೆಪಿ ಶಾಸಕನನ್ನು ಏಕೆ ಬಂಧಿಸಿಲ್ಲ?: ಪ್ರಧಾನಿ ಮೋದಿಗೆ ಕೇಜ್ರಿವಾಲ್

ಲೋಕಾಯುಕ್ತ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಸಿಕ್ಕರೂ ಕರ್ನಾಟಕದ ಬಿಜೆಪಿ ಶಾಸಕನನ್ನು ಏಕೆ ಬಂದಿಸಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ಪ್ರಧಾನಿ...

ನವದೆಹಲಿ: ಲೋಕಾಯುಕ್ತ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಸಿಕ್ಕರೂ ಕರ್ನಾಟಕದ ಬಿಜೆಪಿ ಶಾಸಕನನ್ನು ಏಕೆ ಬಂದಿಸಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಪ್ರಧಾನಿ ಉದ್ದೇಶಿಸಿ ಕುಟುಕು ಟಿಪ್ಪಣಿಯನ್ನು ಟ್ವೀಟ್ ಮಾಡಿರುವ ದೆಹಲಿ ಸಿಎಂ, ಟಿಪ್ಪಣಿಯ ವಿಷಯ: ಲಂಚ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕನಿಗೆ ಜಾಮೀನು ಎಂದು ಬರೆದಿದ್ದಾರೆ.

ಲಂಚ ಪ್ರಕರಣದಲ್ಲಿ ಇಂದು ನಿರೀಕ್ಷಣಾ ಜಾಮೀನು ಪಡೆದ ಕರ್ನಾಟಕದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಉದಾಹರಣೆಯನ್ನು ಉಲ್ಲೇಖಿಸಿದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಬಂಧಿಸಿದ ನೀವು, ಬಿಜೆಪಿ ಶಾಸಕನನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

"ಮನೀಷ್ ಸಿಸೋಡಿಯಾ ಅವರ ಮನೆಯಲ್ಲಿ ನಡೆದ ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ. ಆದರೂ ಸಿಬಿಐ, ಇಡಿ(ಜಾರಿ ನಿರ್ದೇಶನಾಲಯ) ಎಲ್ಲಾ ಸೆಕ್ಷನ್‌ಗಳನ್ನು ಅನ್ವಯಿಸಿ ಅವರನ್ನು ಬಂಧಿಸಲಾಗಿದೆ. ನಿಮ್ಮ ಪಕ್ಷದ ಶಾಸಕರ ಮನೆಯಲ್ಲಿ ಅಷ್ಟು ದೊಡ್ಡ ಪ್ರಮಾಣದ ನಗದು ಪತ್ತೆಯಾಗಿದೆ. ಆದರೂ ಅವರನ್ನು ಏಕೆ ಬಂಧಿಸಲಿಲ್ಲ?" ಎಂದು ಎಎಪಿ ಮುಖ್ಯಸ್ಥ ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT