ಖುಷ್ಬೂ ಸುಂದರ್ 
ದೇಶ

ತಂದೆಯ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ: ಬಿಜೆಪಿ ನಾಯಕಿ ಖುಷ್ಬು

ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ನನ್ನ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ.

ಹೈದರಾಬಾದ್: ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ನನ್ನ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ.

ಈ ಹಿಂದೆ ಖುಷ್ಬೂ ಅವರು ತಮ್ಮ ತಂದೆಯಿಂದಲೇ ಲೈಂಗಿಕ ಕಿರುಕುಳ ಎದುರಿಸಿದ್ದ ಕುರಿತು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವ್ಯಾಪಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಖುಷ್ಬು ಅವರು, ತಂದೆಯ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ ಎಂದು ಹೇಳಿದ್ದಾರೆ.

'ನಾನು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿಲ್ಲ, ಆ ಹೇಳಿಕೆ ನನ್ನಿಂದ ಹೊರಬಂದ ಪ್ರಾಮಾಣಿಕತೆ ಎಂದು ನಾನು ಭಾವಿಸುತ್ತೇನೆ. ನಾನು ಹೇಳಿದ್ದಕ್ಕೆ ನಾಚಿಕೆಪಡುವುದಿಲ್ಲ ಏಕೆಂದರೆ ಇದು ನನಗೆ ಸಂಭವಿಸಿದೆ ಮತ್ತು ಅಪರಾಧಿಯು ತನ್ನ ಬಳಿ ಇರುವುದಕ್ಕೆ ನಾಚಿಕೆಪಡಬೇಕು ಎಂದು ನಾನು ಭಾವಿಸುತ್ತೇನೆ ಎಂದು ಅವರು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

ಮಹಿಳಾ ಆಯೋಗದ ಸದಸ್ಯೆಯಾದ ನಂತರ ತಮ್ಮ ಎಂಟನೆ ವಯಸ್ಸಿನಲ್ಲಿ ತಂದೆ ನಡೆಸಿದ್ದ ಲೈಂಗಿಕ ಕಿರುಕುಳದ ಬಗ್ಗೆ ಬಾಯ್ಬಿಟ್ಟಿದ್ದರು. 

2021ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಡಿಎಂಕೆ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದ ಖುಷ್ಬು ಅವರನ್ನು ಬಿಜೆಪಿ ಪಕ್ಷ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT