ಪಾರಿವಾಳ ಸೆರೆ 
ದೇಶ

ಒಡಿಶಾ: ಕಾಲಿಗೆ ಕ್ಯಾಮರಾ ಅಳವಡಿಸಿದ್ದ ಗೂಢಚಾರ ಪಾರಿವಾಳ ಸೆರೆ

ಕಾಲಿಗೆ ಕ್ಯಾಮರಾ ಮತ್ತು ಮೈಕ್ರೋಚಿಪ್ ನ್ನು ಅಳವಡಿಸಿ ಹಾರಿಬಿಡಲಾಗಿದ್ದ ಗೂಢಚಾರ ಪಾರಿವಾಳವನ್ನು ಒಡಿಶಾದ ಕಡಲ ತೀರದಲ್ಲಿ ಸೆರೆ ಹಿಡಿಯಲಾಗಿದೆ. 

ಭುವನೇಶ್ವರ್: ಕಾಲಿಗೆ ಕ್ಯಾಮರಾ ಮತ್ತು ಮೈಕ್ರೋಚಿಪ್ ನ್ನು ಅಳವಡಿಸಿ ಹಾರಿಬಿಡಲಾಗಿದ್ದ ಗೂಢಚಾರ ಪಾರಿವಾಳವನ್ನು ಒಡಿಶಾದ ಕಡಲ ತೀರದಲ್ಲಿ ಸೆರೆ ಹಿಡಿಯಲಾಗಿದೆ. 

ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಪರದೀಪ್ ಕರಾವಳಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು,  ಈ ಪಾರಿವಾಳವನ್ನು ಗೂಢಚಾರಿಕೆಗಾಗಿ ಬಳಕೆ ಮಾಡಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದಾಗ ಈ ಪಾರಿವಾಳ ತಮ್ಮ ಟ್ರಾಲರ್‌ನಲ್ಲಿ ಕುಳಿತಿದ್ದನ್ನು ಕೆಲವು ಮೀನುಗಾರರು ಕಂಡಿದ್ದರು.

ಪಾರಿವಾಳವನ್ನು ಹಿಡಿದು ಅದನ್ನು ಸಮುದ್ರ ಪ್ರದೇಶದ ಪೊಲೀಸರಿಗೆ ಒಪ್ಪಿಸಲಾಗಿದೆ.
 
ನಮ್ಮ ಸಿಬ್ಬಂದಿಗಳು ಪಾರಿವಾಳವನ್ನು ಪರೀಕ್ಷೆ ಮಾಡಲಿದ್ದಾರೆ, ಅದರ ಕಾಲುಗಳಿಗೆ ಜೋಡಿಸಲಾದ ಸಾಧನಗಳನ್ನು ಪರೀಕ್ಷಿಸಲು ರಾಜ್ಯ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ಸಹಾಯವನ್ನು ಪಡೆಯಲಾಗುತ್ತದೆ. ಸಾಧನಗಳು ಕ್ಯಾಮೆರಾ ಮತ್ತು ಮೈಕ್ರೋಚಿಪ್ ನ್ನು ಪಾರಿವಾಳದಲ್ಲಿ ಅಳವಡಿಸಿದಂತೆ ತೋರುತ್ತದೆ "ಎಂದು ಜಗತ್ಸಿಂಗ್‌ಪುರ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪಿಆರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT