ಅತಿಶಿ, ಸೌರಭ್ ಭಾರದ್ವಾಜ್ 
ದೇಶ

ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್ ಪ್ರಮಾಣ; ಖಾತೆ ಹಂಚಿದ ಕೇಜ್ರಿವಾಲ್

ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಗುರುವಾರ ದೆಹಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ನವದೆಹಲಿ: ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಗುರುವಾರ ದೆಹಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಇಂದು ದೆಹಲಿಯ ನಡೆದ ಸರಳ ಸಮಾರಂಭದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅತಿಶಿ ಹಾಗೂ ಸೌರಭ್ ಭಾರದ್ವಾಜ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ವಿಧಾನಸಭೆ ಪ್ರತಿಪಕ್ಷ ನಾಯಕ ರಾಮವೀರ್ ಸಿಂಗ್ ಅವರ ಉಪಸ್ಥಿತರಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಪುಟಕ್ಕೆ ಹೊಸದಾಗಿ ನೇಮಕಗೊಂಡ ಅತಿಶಿ ಅವರಿಗೆ ಶಿಕ್ಷಣ, ಲೋಕೋಪಯೋಗಿ, ವಿದ್ಯುತ್ ಮತ್ತು ಪ್ರವಾಸೋದ್ಯಮ ಖಾತೆಗಳನ್ನು ನೀಡಿದ್ದಾರೆ.

ಇನ್ನು ಸೌರಭ್ ಭಾರದ್ವಾಜ್ ಅವರಿಗೆ ಆರೋಗ್ಯ, ನೀರು ಮತ್ತು ಕೈಗಾರಿಕೆ ಹಾಗೂ ನಗರಾಭಿವೃದ್ಧಿಯನ್ನು ಕೇಜ್ರಿವಾಲ್ ಅವರು ಹಂಚಿಕೆ ಮಾಡಿದ್ದಾರೆ. 

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿಯ ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಂದ ತೆರವಾದ ಸಚಿವ ಸ್ಥಾನಗಳನ್ನು ಈ ಇಬ್ಬರು ಶಾಸಕರಿಗೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT