ಅತಿಶಿ, ಸೌರಭ್ ಭಾರದ್ವಾಜ್ 
ದೇಶ

ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್ ಪ್ರಮಾಣ; ಖಾತೆ ಹಂಚಿದ ಕೇಜ್ರಿವಾಲ್

ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಗುರುವಾರ ದೆಹಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ನವದೆಹಲಿ: ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಗುರುವಾರ ದೆಹಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಇಂದು ದೆಹಲಿಯ ನಡೆದ ಸರಳ ಸಮಾರಂಭದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅತಿಶಿ ಹಾಗೂ ಸೌರಭ್ ಭಾರದ್ವಾಜ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ವಿಧಾನಸಭೆ ಪ್ರತಿಪಕ್ಷ ನಾಯಕ ರಾಮವೀರ್ ಸಿಂಗ್ ಅವರ ಉಪಸ್ಥಿತರಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಪುಟಕ್ಕೆ ಹೊಸದಾಗಿ ನೇಮಕಗೊಂಡ ಅತಿಶಿ ಅವರಿಗೆ ಶಿಕ್ಷಣ, ಲೋಕೋಪಯೋಗಿ, ವಿದ್ಯುತ್ ಮತ್ತು ಪ್ರವಾಸೋದ್ಯಮ ಖಾತೆಗಳನ್ನು ನೀಡಿದ್ದಾರೆ.

ಇನ್ನು ಸೌರಭ್ ಭಾರದ್ವಾಜ್ ಅವರಿಗೆ ಆರೋಗ್ಯ, ನೀರು ಮತ್ತು ಕೈಗಾರಿಕೆ ಹಾಗೂ ನಗರಾಭಿವೃದ್ಧಿಯನ್ನು ಕೇಜ್ರಿವಾಲ್ ಅವರು ಹಂಚಿಕೆ ಮಾಡಿದ್ದಾರೆ. 

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿಯ ಹಿರಿಯ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಂದ ತೆರವಾದ ಸಚಿವ ಸ್ಥಾನಗಳನ್ನು ಈ ಇಬ್ಬರು ಶಾಸಕರಿಗೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT