ವಯನಾಡ್ ಮೂಲದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಶಫಿ ಎಂಬಾತನನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ 1,487 ಗ್ರಾಂ ಚಿನ್ನ ಕಳ್ಳಸಾಗಣೆಗಾಗಿ ಬಂಧಿಸಲಾಗಿದೆ. (ಫೋಟೋ | ಎಎನ್‌ಐ ಟ್ವಿಟರ್) 
ದೇಶ

1,487 ಗ್ರಾಂ ಚಿನ್ನ ಸಾಗಿಸುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಬಂಧಿಸಿದ ಕಸ್ಟಮ್ಸ್

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ.

ಕೊಚ್ಚಿ: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ.

ವಯನಾಡು ಮೂಲದ ಶಫಿ ಎಂಬಾತನನ್ನು 1487 ಗ್ರಾಂ ಚಿನ್ನಾಭರಣದೊಂದಿಗೆ ಕೊಚ್ಚಿಯಲ್ಲಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ಪೊಲೀಸರು ಬಂಧಿಸಿದ್ದಾರೆ.

ಬಹ್ರೇನ್-ಕೋಯಿಕ್ಕೋಡ್-ಕೊಚ್ಚಿ ಸೇವೆಯ ಕ್ಯಾಬಿನ್ ಸಿಬ್ಬಂದಿ ಶಫಿ ಎಂಬಾತ ಚಿನ್ನ ಕಳ್ಳ ಸಾಗಣೆ ಮಾಡುತ್ತಿರುವುದಾಗಿ ಗೌಪ್ಯ ಮಾಹಿತಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್‌ಗೆ ಲಭಿಸಿತ್ತು. ಈ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. 

ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು ಅಂಗಿಯ ತೋಳನ್ನು ಮುಚ್ಚಿ ಹಸಿರು ಚಾನಲ್ ಮೂಲಕ ಹಾದುಹೋಗುವುದು ಆತನ ಗುರಿಯಾಗಿತ್ತು. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಮಧ್ಯೆ, ಬುಧವಾರ ಚೆನ್ನೈ ವಿಮಾನ ನಿಲ್ದಾಣದಲ್ಲಿ 3.32 ಕೋಟಿ ಮೌಲ್ಯದ 6.8 ಕೆಜಿ ತೂಕದ ಚಿನ್ನವನ್ನು ಸಾಗಿಸಲು ಯತ್ನಿಸುತ್ತಿದ್ದ ಸಿಂಗಾಪುರದಿಂದ ಆಗಮಿಸಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಚೆನ್ನೈ ಕಸ್ಟಮ್ಸ್ ತಿಳಿಸಿದೆ.

ಅಧಿಕಾರಿಗಳ ಪ್ರಕಾರ, ಪ್ರಯಾಣಿಕರು ಸಿಂಗಾಪುರದಿಂದ AI-347 ಮತ್ತು 6E-52 ಮೂಲಕ ಚೆನ್ನೈಗೆ ಬಂದಿದ್ದರು.

ಚೆನ್ನೈ ಕಸ್ಟಮ್ಸ್ ಈ ಕುರಿತು ಟ್ವೀಟ್ ಮಾಡಿದ್ದು, 'ಗುಪ್ತಚರ ಮಾಹಿತಿ ಆಧರಿಸಿ, ಸಿಂಗಾಪುರದಿಂದ AI-347 ಮತ್ತು 6E-52 ಮೂಲಕ ಬಂದ 2 ಪ್ರಯಾಣಿಕರನ್ನು ಮಾರ್ಚ್ 07 ರಂದು ಕಸ್ಟಮ್ಸ್ ತಡೆಹಿಡಿದಿದೆ. ಅವರ ವಸ್ತುಗಳನ್ನು ಹುಡುಕಿದಾಗ, 3.32 ಕೋಟಿ ರೂ. ಮೌಲ್ಯದ ಒಟ್ಟು 6.8 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಯಾಣಿಕರನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT