ವಯನಾಡ್ ಮೂಲದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಶಫಿ ಎಂಬಾತನನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ 1,487 ಗ್ರಾಂ ಚಿನ್ನ ಕಳ್ಳಸಾಗಣೆಗಾಗಿ ಬಂಧಿಸಲಾಗಿದೆ. (ಫೋಟೋ | ಎಎನ್‌ಐ ಟ್ವಿಟರ್) 
ದೇಶ

1,487 ಗ್ರಾಂ ಚಿನ್ನ ಸಾಗಿಸುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಬಂಧಿಸಿದ ಕಸ್ಟಮ್ಸ್

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ.

ಕೊಚ್ಚಿ: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ.

ವಯನಾಡು ಮೂಲದ ಶಫಿ ಎಂಬಾತನನ್ನು 1487 ಗ್ರಾಂ ಚಿನ್ನಾಭರಣದೊಂದಿಗೆ ಕೊಚ್ಚಿಯಲ್ಲಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ಪೊಲೀಸರು ಬಂಧಿಸಿದ್ದಾರೆ.

ಬಹ್ರೇನ್-ಕೋಯಿಕ್ಕೋಡ್-ಕೊಚ್ಚಿ ಸೇವೆಯ ಕ್ಯಾಬಿನ್ ಸಿಬ್ಬಂದಿ ಶಫಿ ಎಂಬಾತ ಚಿನ್ನ ಕಳ್ಳ ಸಾಗಣೆ ಮಾಡುತ್ತಿರುವುದಾಗಿ ಗೌಪ್ಯ ಮಾಹಿತಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್‌ಗೆ ಲಭಿಸಿತ್ತು. ಈ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. 

ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು ಅಂಗಿಯ ತೋಳನ್ನು ಮುಚ್ಚಿ ಹಸಿರು ಚಾನಲ್ ಮೂಲಕ ಹಾದುಹೋಗುವುದು ಆತನ ಗುರಿಯಾಗಿತ್ತು. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಮಧ್ಯೆ, ಬುಧವಾರ ಚೆನ್ನೈ ವಿಮಾನ ನಿಲ್ದಾಣದಲ್ಲಿ 3.32 ಕೋಟಿ ಮೌಲ್ಯದ 6.8 ಕೆಜಿ ತೂಕದ ಚಿನ್ನವನ್ನು ಸಾಗಿಸಲು ಯತ್ನಿಸುತ್ತಿದ್ದ ಸಿಂಗಾಪುರದಿಂದ ಆಗಮಿಸಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಚೆನ್ನೈ ಕಸ್ಟಮ್ಸ್ ತಿಳಿಸಿದೆ.

ಅಧಿಕಾರಿಗಳ ಪ್ರಕಾರ, ಪ್ರಯಾಣಿಕರು ಸಿಂಗಾಪುರದಿಂದ AI-347 ಮತ್ತು 6E-52 ಮೂಲಕ ಚೆನ್ನೈಗೆ ಬಂದಿದ್ದರು.

ಚೆನ್ನೈ ಕಸ್ಟಮ್ಸ್ ಈ ಕುರಿತು ಟ್ವೀಟ್ ಮಾಡಿದ್ದು, 'ಗುಪ್ತಚರ ಮಾಹಿತಿ ಆಧರಿಸಿ, ಸಿಂಗಾಪುರದಿಂದ AI-347 ಮತ್ತು 6E-52 ಮೂಲಕ ಬಂದ 2 ಪ್ರಯಾಣಿಕರನ್ನು ಮಾರ್ಚ್ 07 ರಂದು ಕಸ್ಟಮ್ಸ್ ತಡೆಹಿಡಿದಿದೆ. ಅವರ ವಸ್ತುಗಳನ್ನು ಹುಡುಕಿದಾಗ, 3.32 ಕೋಟಿ ರೂ. ಮೌಲ್ಯದ ಒಟ್ಟು 6.8 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಯಾಣಿಕರನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT