ಮುಸ್ಲಿಮರೊಂದಿಗೆ ಪ್ರಧಾನಿ ಮೋದಿ 
ದೇಶ

ದೇಶವ್ಯಾಪಿ ಮುಸ್ಲಿಮರನ್ನು ತಲುಪುವ ಬಿಜಿಪಿ ಕಾರ್ಯಕ್ರಮಕ್ಕೆ ಜಮ್ಮು-ಕಾಶ್ಮೀರದಲ್ಲಿ ಮಿಶ್ರ ಪ್ರತಿಕ್ರಿಯೆ

ದೇಶವ್ಯಾಪಿ ಮುಸ್ಲಿಮರನ್ನು ತಲುಪುವುದಕ್ಕಾಗಿ ಬಿಜೆಪಿಯ ಕಾರ್ಯಕ್ರಮ ಮಾ.09 ರಿಂದ ಆರಂಭವಾಗಿದ್ದು, ಮುಸ್ಲಿಮ್ ಬಾಹುಳ್ಯವಿರುವ ಕಾಶ್ಮೀರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನವದೆಹಲಿ: ದೇಶವ್ಯಾಪಿ ಮುಸ್ಲಿಮರನ್ನು ತಲುಪುವುದಕ್ಕಾಗಿ ಬಿಜೆಪಿಯ ಕಾರ್ಯಕ್ರಮ ಮಾ.09 ರಿಂದ ಆರಂಭವಾಗಿದ್ದು, ಮುಸ್ಲಿಮ್ ಬಾಹುಳ್ಯವಿರುವ ಕಾಶ್ಮೀರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಕಣಿವೆ ಹಾಗೂ ದೇಶದ ಉಳಿದ ಭಾಗಗಳ ನಡುವೆ ಉಂಟಾಗಿರುವ ಅಂತರವನ್ನು ನಿವಾರಿಸಬೇಕೆಂಬ ವಿಷಯದಲ್ಲಿ ಒಮ್ಮತ ವ್ಯಕ್ತವಾಗಿದೆ. 

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ, ಮಾ.10 ರಂದು ದೇಶಾದ್ಯಂತ ಮುಸ್ಲಿಮರನ್ನು ತಲುಪುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದೆ. ಮೊದಲ ಹಂತದಲ್ಲಿ ಜಮ್ಮು-ಕಾಶ್ಮೀರ ಸೇರಿ ದೇಶದ 64 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲಿದೆ.

ಜಮ್ಮು-ಕಾಶ್ಮೀರದ ಮುಸ್ಲಿಮರು ಹಲವು ಸಮಸ್ಯೆಗಳನ್ನು ಹೊಂದಿದ್ದು, ಅವುಗಳನ್ನು ಬಗೆಹರಿಸಿಕೊಳ್ಳಲು ಬಯಸುತ್ತಿದ್ದಾರೆ ಅಂತೆಯೇ ದೇಶದ ವಿವಿಧ ಭಾಗಗಳಲ್ಲಿರುವ ಮುಸ್ಲಿಮರು ಭದ್ರತೆಯ ಭಾವವನ್ನು ಎದುರುನೋಡುತ್ತಿದ್ದಾರೆ.  ಸರ್ಕಾರದಲ್ಲಿ ಯಾರೇ ಇರಲಿ, ಪರಿಹಾರಗಳನ್ನು ಅವರು ಎದುರು ನೋಡುತ್ತಿದ್ದರೆ, ಅದು ಸ್ವಾಗತಾರ್ಹ ಕ್ರಮ ಎಂದು ಜಮ್ಮು-ಕಾಶ್ಮೀರದ್ ಅಗ್ರಾಂಡ್ ಮುಫ್ತಿ  ಮುಫ್ತಿ ನಾಸಿರ್ ಉಲ್ ಇಸ್ಲಾಮ್ ಪಿಟಿಐ ಗೆ ಹೇಳಿದ್ದಾರೆ.

ಇದನ್ನೂ ಓದಿ: ಶಬ್-ಎ-ಬರಾತ್ ರಾತ್ರಿ ಬೈಕ್ ಸ್ಟಂಟ್ ಮಾಡಬೇಡಿ; ಯುವಕರಿಗೆ ಮುಸ್ಲಿಂ ಸಮುದಾಯದ ಹಿರಿಯರ ಕಿವಿಮಾತು
 
ಹರ್ಯಾಣದಲ್ಲಿ ಇತ್ತೀಚೆಗೆ ವರದಿಯಾದ ಇಬ್ಬರು ಮುಸ್ಲಿಮರ ಮೇಲಿನ ಗುಂಪು ಥಳಿತ ಪ್ರಕರಣಗಳು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ನಾಸಿರ್ ಉಲ್ ಇಸ್ಲಾಮ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಕಾಶ್ಮೀರ ಕಣಿವೆಯ ಮುಸ್ಲಿಮರ ನಡುವೆ ಅಂತರವಿದೆ. ಆರ್ಟಿಕಲ್ 370 ರದ್ದತಿ ಬಳಿಕ ಹಲವು ಭರವಸೆಗಳನ್ನು ನೀಡಲಾಗಿತ್ತು, ಆದರೆ ಅದ್ಯಾವುದೂ ನಿಜವಾಗಿಲ್ಲ. ನೆಲಸಮಗೊಳಿಸುವ ಅಭಿಯಾನದ ಮೂಲಕ ಜನರ ಹೃದಯ ಗೆಲ್ಲುವುದಕ್ಕೆ ಸಾಧ್ಯವೇ?, ಅವರು ಜನರನ್ನು ಮೂರ್ಖರನ್ನಾಗಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT