ಅರವಿಂದ ಕೇಜ್ರಿವಾಲ್ 
ದೇಶ

ಹಿರಣ್ಯ ಕಶಿಪುವಿನಂತೆ ಇಂದಿಗೂ ಕೆಲವರು ತಮ್ಮನ್ನು ತಾವು ದೇವರೆಂದು ಪರಿಗಣಿಸುತ್ತಿದ್ದಾರೆ: ಅರವಿಂದ ಕೇಜ್ರಿವಾಲ್

ಹಿರಣ್ಯಕಶಿಪು ಮತ್ತು ಪ್ರಹ್ಲಾದನ ಪೌರಾಣಿಕ ಪ್ರಸಂಗಗಳೊಂದಿಗೆ ಇತ್ತೀಚಿನ ಘಟನೆಗಳನ್ನು ಹೋಲಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ, ದೇಶ ಮತ್ತು ಮಕ್ಕಳ ಸೇವೆ ಮಾಡುವವರನ್ನು ಕಂಬಿಯ ಹಿಂದೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ನವದೆಹಲಿ: ಹಿರಣ್ಯಕಶಿಪು ಮತ್ತು ಪ್ರಹ್ಲಾದನ ಪೌರಾಣಿಕ ಪ್ರಸಂಗಗಳೊಂದಿಗೆ ಇತ್ತೀಚಿನ ಘಟನೆಗಳನ್ನು ಹೋಲಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ, ದೇಶ ಮತ್ತು ಮಕ್ಕಳ ಸೇವೆ ಮಾಡುವವರನ್ನು ಕಂಬಿಯ ಹಿಂದೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

ದೆಹಲಿಯ ಅಬಕಾರಿ ನೀತಿ ಜಾರಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಬಂಧಿಸಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ಯಾರನ್ನೂ ಹೆಸರಿಸದೆ, ಹಿರಣ್ಯಕಶಿಪು ಹೇಗೆ ದೇವರನ್ನು ಪೂಜಿಸುವುದನ್ನು ತಡೆಯಲು ಸಾಧ್ಯವಿಲ್ಲವೋ ಹಾಗೆಯೇ ಆಧುನಿಕ ಪ್ರಹ್ಲಾದನನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅವರು ತಮ್ಮ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಪ್ರಹ್ಲಾದ ಎಂದು ಉಲ್ಲೇಖಿಸಿದ್ದಾರೆ.

ಹಿರಣ್ಯಕಶಿಪು ತನ್ನನ್ನು ತಾನು ದೇವರೆಂದು ಪರಿಗಣಿಸಲು ಪ್ರಾರಂಭಿಸಿದನು. ಪ್ರಹ್ಲಾದ ದೇವರ ಮಾರ್ಗದಲ್ಲಿ ನಡೆಯದಂತೆ ತಡೆಯಲು ಹಲವಾರು ಪ್ರಯತ್ನಗಳನ್ನು ಮಾಡಿ ಅವನ ಮೇಲೆ ದೌರ್ಜನ್ಯ ಎಸಗಿದನು. ಇಂದಿಗೂ ಕೆಲವರು ತಮ್ಮನ್ನು ತಾವು ದೇವರೆಂದು ಪರಿಗಣಿಸಲು ಆರಂಭಿಸಿದ್ದಾರೆ. ದೇಶ ಮತ್ತು ಮಕ್ಕಳ ಸೇವೆ ಮಾಡುತ್ತಿರುವ ಪ್ರಹ್ಲಾದನನ್ನು ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದರು.

ಆ ಸಮಯದಲ್ಲಿ ಪ್ರಹ್ಲಾದನನ್ನು ತಡೆಯಲು ಅವರಿಗೆ ಸಾಧ್ಯವಾಗಲಿಲ್ಲ. ಈಗಲೂ ಕೂಡ ಹಾಗೆ ಮಾಡಲು ಅವರಿಗೆ ಸಾಧ್ಯವಾಗುವುದಿಲ್ಲ' ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮನೀಶ್‌ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಮಧ್ಯಾಹ್ನ ರೋಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, 10 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT