ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ; ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣು!

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ಥಿಕ ಸಂಕಷ್ಟ ಮತ್ತು ಬೆಲೆ ಕುಸಿತ ಸೇರಿದಂತೆ ಹಲವಾರು ಕಾರಣಗಳಿಂದ ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣಾಗುತ್ತಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ಥಿಕ ಸಂಕಷ್ಟ ಮತ್ತು ಬೆಲೆ ಕುಸಿತ ಸೇರಿದಂತೆ ಹಲವಾರು ಕಾರಣಗಳಿಂದ ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣಾಗುತ್ತಿದ್ದಾರೆ.

ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ, ಏಕನಾಥ್ ಶಿಂಧೆ ಆಡಳಿತದಲ್ಲಿ ಕಳೆದ ಏಳು ತಿಂಗಳಲ್ಲಿ 1,203 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಆಡಳಿತದಲ್ಲಿ ಎರಡೂವರೆ ವರ್ಷಗಳ ಅವಧಿಯಲ್ಲಿ 1,660 ರೈತರು ಸಾವನ್ನಪ್ಪಿದ್ದಾರೆ. 

2014 ಮತ್ತು 2019 ರ ಅವಧಿಯಲ್ಲಿ ದೇವೇಂದ್ರ ಫಡ್ವೈಸ್ ನೇತೃತ್ವದ ಬಿಜೆಪಿ ಆಡಳಿತದಲ್ಲಿ 5,061 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿಅಂಶಗಳು ತಿಳಿಸಿವೆ.

ಈ ಅಂಕಿಅಂಶಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎನ್‌ಸಿಪಿ ಹಿರಿಯ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಶಿಂಧೆ-ಫಡ್ನವಿಸ್ ಆಡಳಿತದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲವಾಗಿಲ್ಲ ಎಂದು ಆರೋಪಿಸಿದ್ದಾರೆ.

"ನಾವು ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಮುಖ್ಯಮಂತ್ರಿಯನ್ನು ದೂಷಿಸಲು ಬಯಸುವುದಿಲ್ಲ. ಆದರೆ ಶಿಂಧೆ ಸರ್ಕಾರದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೆ ಶರಣಾಗುತ್ತಿರುವುದು ಕಟುವಾದ ವಾಸ್ತವ. ರೈತರಲ್ಲಿ ಆರ್ಥಿಕ ಸಂಕಷ್ಟವು ರೈತರ ಆತ್ಮಹತ್ಯೆಯ ಹಿಂದಿನ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಹತ್ತಿ, ಈರುಳ್ಳಿ, ಸೋಯಾಬಿನ್ ಬೆಳೆಯುವ ರೈತರ ಬೆಳೆಗೆ ಈ ವರ್ಷ ಸೂಕ್ತ ಬೆಲೆ ಸಿಗದೆ ರೈತರು ಈರುಳ್ಳಿಯನ್ನು ರಸ್ತೆಗೆ ಎಸೆದಿದ್ದನ್ನು ನಾವು ನೋಡಿದ್ದೇವೆ" ಎಂದು ಪವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT