ಕೇಂದ್ರ ಸಚಿವ ಅನುರಾಗ್ ಠಾಕೂರ್ 
ದೇಶ

ಭಾರತ, ಪ್ರದಾನಿ ಮೋದಿ ಬಗ್ಗೆ ಅಪ ಪ್ರಚಾರ: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಕೇಂದ್ರ ವಾರ್ತಾ ಸಚಿವರ ವಾಗ್ದಾಳಿ

ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪ ಪ್ರಚಾರ ನಡೆಸಲಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಸೇರಿದಂತೆ ಕೆಲ ವಿದೇಶಿ ಮಾಧ್ಯಮಗಳ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. 

ನವದೆಹಲಿ: ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪ ಪ್ರಚಾರ ನಡೆಸಲಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಸೇರಿದಂತೆ ಕೆಲ ವಿದೇಶಿ ಮಾಧ್ಯಮಗಳ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಠಾಕೂರ್, ಕೆಲವು ವಿದೇಶಿ ಮಾಧ್ಯಮಗಳು ಭಾರತ ಮತ್ತು ಪ್ರಧಾನಿ ಮೋದಿ  ವಿರುದ್ಧ ದ್ವೇಷ ಹೊಂದಿದ್ದು, ನಮ್ಮ ಪ್ರಜಾಪ್ರಭುತ್ವ ಮತ್ತು  ಒಕ್ಕೂಟ ವ್ಯವಸ್ಥೆಬಗ್ಗೆ ವ್ಯವಸ್ಥಿತವಾಗಿ ಸುಳ್ಳನ್ನು ಹರಡಲು ಬಹಳ ಹಿಂದಿನಿಂದಲೂ ಪ್ರಯತ್ನಿಸುತ್ತಿವೆ. "ನ್ಯೂಯಾರ್ಕ್ ಟೈಮ್ಸ್ ಭಾರತದ ಬಗ್ಗೆ ಏನನ್ನಾದರೂ ಪ್ರಕಟಿಸುವಾಗ ತಟಸ್ಥತೆಯ ಎಲ್ಲಾ ಸೋಗುಗಳನ್ನು ಬಹಳ ಹಿಂದೆಯೇ ಕೈಬಿಟ್ಟಿದೆ. ಕಾಶ್ಮೀರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕುರಿತ ನ್ಯೂಯಾರ್ಕ್ ಟೈಮ್ಸ್ ಅಭಿಪ್ರಾಯ ಕುಚೇಷ್ಟೆಯಾಗಿದೆ. ಭಾರತ ಮತ್ತು ಪ್ರಜಾಸತಾತ್ಮಕ ಸಂಸ್ಥೆಗಳು ಮತ್ತು ಮೌಲ್ಯಗಳ ಬಗ್ಗೆ ಅಪ ಪ್ರಚಾರ ಮಾಡಲಾಗುತ್ತಿದೆ ಎಂದು ಫೋಸ್ಟ್ ಮಾಡಿದ್ದಾರೆ. 

ನ್ಯೂಯಾರ್ಕ್ ಟೈಮ್ಸ್ ನಂತಹ ಕೆಲ ಸಮನ ಮನಸ್ಕ ವಿದೇಶಿ ಮಾಧ್ಯಮಗಳು ಧೀರ್ಘ ಕಾಲದಿಂದಲೂ ನಮ್ಮ ಪ್ರಜಾಪ್ರಭುತ್ವ ಮತ್ತು ಪ್ರಧಾನಿ ಮೋದಿ ವಿರುದ್ಧ ಇಂತಹ ಸುಳ್ಳನ್ನು ಹರಡುವ ಕೆಲಸ ಮಾಡುತ್ತಿವೆ. ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಇತರ ಮೂಲಭೂತ ಹಕ್ಕುಗಳಂತೆಯೇ ಪವಿತ್ರವಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. 

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಠಾಕೂರ್, ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚಿಗೆ ಯುಕೆಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಭಾರತದ ಪ್ರಜಾಪ್ರಭುತ್ವದ ಮೇಲೆ ಕೇಂದ್ರ ಸರ್ಕಾರ ದಾಳಿ ನಡೆಸುತ್ತಿದೆ ಎಂದು ಟೀಕಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT