ಸಾಂದರ್ಭಿಕ ಚಿತ್ರ 
ದೇಶ

ನವದೆಹಲಿ: ಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ ಪೇದೆ ಮೇಲೆ ದಾಳಿ; ಓರ್ವನ ಬಂಧನ

ಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್‌ ತಗ್ಗಿಸುವಂತೆ ಹೇಳಿದ ಪೊಲೀಸ್‌ ಪೇದೆ ಮೇಲೆ ವ್ಯಕ್ತಿಯೊಬ್ಬ ಕಾರು ಹರಿಸಲು ಯತ್ನಿಸಿದ ಘಟನೆ ದೆಹಲಿಯ ದ್ವಾರಕಾ ಎಂಬಲ್ಲಿ ಮಾರ್ಚ್ 8ರಂದು ಹೋಳಿ ಹಬ್ಬದ ದಿನ ನಡೆದಿದೆ.

ನವದೆಹಲಿ: ಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್‌ ತಗ್ಗಿಸುವಂತೆ ಹೇಳಿದ ಪೊಲೀಸ್‌ ಪೇದೆ ಮೇಲೆ ವ್ಯಕ್ತಿಯೊಬ್ಬ ಕಾರು ಹರಿಸಲು ಯತ್ನಿಸಿದ ಘಟನೆ ದೆಹಲಿಯ ದ್ವಾರಕಾ ಎಂಬಲ್ಲಿ ಮಾರ್ಚ್ 8ರಂದು ಹೋಳಿ ಹಬ್ಬದ ದಿನ ನಡೆದಿದೆ.

ಆರೋಪಿಯನ್ನು ಇಲ್ಲಿನ ಧುಲ್ಸಿರಸ್ ಗ್ರಾಮದ ನಿವಾಸಿ ನಿತಿನ್ ಗೋಡಾರ(29) ಎಂದು ಗುರುತಿಸಲಾಗಿದೆ. ದ್ವಾರಕಾದ ಸೆಕ್ಟರ್‌ – 10ರ ಮಾರುಕಟ್ಟೆ ಪ್ರದೇಶದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಹೋಳಿ ಹಬ್ಬದಂದು ರಾತ್ರಿ 8.30ರ ಸುಮಾರಿಗೆ ಕಾರಿನಲ್ಲಿ ಜೋರು ವಾಲ್ಯೂಮ್‌ನಲ್ಲಿ ಹಾಡುಗಳು ಕೇಳಿಬರುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಾರಿನಲ್ಲಿ ಹಾಡಿನ ವಾಲ್ಯೂಮ್‌ ಕಡಿಮೆ ಮಾಡಲು ಹೇಳಿದಾಗ ಆರೋಪಿಯು, ಹೆಡ್ ಕಾನ್ಸ್‌ಟೇಬಲ್ ಜಗದೀಶ್‌ಗೆ ಕಾರಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ. ಅವರು ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಜಗದೀಶ್‌ಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ಹೇಳಿದ್ದಾರೆ

ಆತನು ಪಾನಮತ್ತನಾಗಿದ್ದು, ವೈದ್ಯಕೀಯ ಪರೀಕ್ಷೆಗಳಲ್ಲಿ ಇದು ಧೃಡವಾಗಿದೆ. ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. ಆತನ ವಿರುದ್ಧ ಕಾನೂನಿನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT