ಸಾಂದರ್ಭಿಕ ಚಿತ್ರ 
ದೇಶ

ಡಕಾಯಿತ ಎಂದು ಶಂಕಿಸಿ 'ರೈತ'ನನ್ನು ಗುಂಡಿಕ್ಕಿ ಕೊಂದ ಅಸ್ಸಾಂ ಪೊಲೀಸರು: ಸಿಐಡಿ ತನಿಖೆಯಲ್ಲಿ ಬಹಿರಂಗ

ಅಸ್ಸಾಂನ ಉದಲ್‌ಗುರಿ ಜಿಲ್ಲೆಯಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಡಕಾಯಿತ ಎಂದು ತಪ್ಪಾಗಿ ಭಾವಿಸಿ ಹತ್ಯೆ ಮಾಡಲಾಗಿದೆ ಎಂಬುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಗುವಾಹಟಿ: ಅಸ್ಸಾಂನ ಉದಲ್‌ಗುರಿ ಜಿಲ್ಲೆಯಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಡಕಾಯಿತ ಎಂದು ತಪ್ಪಾಗಿ ಭಾವಿಸಿ ಹತ್ಯೆ ಮಾಡಲಾಗಿದೆ ಎಂಬುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮೃತ ವ್ಯಕ್ತಿ ಡಕಾಯಿತ ಕೆನರಾಮ್ ಬೊರೊ ಅಲಿಯಾಸ್ ಕೆನರಾಮ್ ಬಸುಮತರಿ ಅಲ್ಲ. ಪೊಲೀಸರ ಗುಂಡಿಗೆ ಬಲಿಯಾದ ವ್ಯಕ್ತಿ ದಿಂಬೇಶ್ವರ್ ಮುಚಹರಿ ಎಂದು ಗುರುತಿಸಲಾಗಿದೆ. ಅವರು ಒಬ್ಬ "ಸಣ್ಣ ರೈತ" ಎಂಬುದು ಸಿಐಡಿ ತನಿಖೆಯಿಂದ ತಿಳಿದುಬಂದಿದೆ. 

ಮೃತ ರೈತ ಒಬ್ಬ "ಕಠಿಣ ಅಪರಾಧಿ" ಎಂದು ಪ್ರತಿಪಾದಿಸಿದ್ದ ಅಸ್ಸಾಂ ಪೊಲೀಸರು, ಫೆಬ್ರವರಿ 24 ರಂದು ರೌಟಾ ಪ್ರದೇಶದ ಧನ್ಸಿರಿಖುತಿ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಸಹ ಗಾಯಗೊಂಡಿದ್ದಾರೆ ಎಂದು ಹೇಳಿದ್ದರು.

ಅಂತಿಮ ವಿಧಿವಿಧಾನಗಳನ್ನು ನಡೆಸಿ ಶವವನ್ನು ಸಮಾಧಿ ಮಾಡಿದ ನಂತರ, ಮುಚಹರಿಯ ರೈತನ ಕುಟುಂಬ, ಇದು ತಮ್ಮ ಮಗನೆಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾರ್ಚ್ 2 ರಂದು ಸಿಐಡಿ ತನಿಖೆಗೆ ಆದೇಶಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದರು.

ನಂತರ ಶವವನ್ನು ಹೊರತೆಗೆದು, ಡಿಎನ್‌ಎ ಪರೀಕ್ಷೆ ನಡೆಸಿದಾಗ ಮೃತ ವ್ಯಕ್ತಿ ಮುಚಹರಿ, ಬೋರೋ ಅಲ್ಲ ಎಂದು ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT