ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ 
ದೇಶ

9 ಗಂಟೆ ವಿಚಾರಣೆ ಬಳಿಕ ಇಡಿ ಕಚೇರಿಯಿಂದ ತೆರಳಿದ ಕವಿತಾ, ಮತ್ತೆ ಮಾ.16ಕ್ಕೆ ಹಾಜರಾಗುವಂತೆ ಸಮನ್ಸ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಜಾರಿ ನಿರ್ದೇಶನಾಲಯ(ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ಅವರ ಪುತ್ರಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸತತ 9...

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಜಾರಿ ನಿರ್ದೇಶನಾಲಯ(ಇಡಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ಅವರ ಪುತ್ರಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸತತ 9 ಗಂಟೆಗಳ ವಿಚಾರಣೆ ನಂತರ ಇಡಿ ಕಚೇರಿಯಿಂದ ತೆರಳಿದ್ದಾರೆ.

44 ವರ್ಷದ ಕೆ ಕವಿತಾ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಒಂಬತ್ತು ಗಂಟೆಗಳ ವಿಚಾರಣೆ ಮತ್ತು ಹೇಳಿಕೆ ದಾಖಲಿಸಿದ ನಂತರ ರಾತ್ರಿ 8 ಗಂಟೆ ಸುಮಾರಿಗೆ ಇಡಿ ಪ್ರಧಾನ ಕಚೇರಿಯಿಂದ ತೆರಳಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿಗೆ ಮಾರ್ಚ್ 16 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕವಿತಾ ಅವರು ಇಂದು ಬೆಳಗ್ಗೆ 11.15ರ ಸುಮಾರಿಗೆ ನಿರ್ದೇಶನಾಲಯದ ಪ್ರಧಾನ ಕಛೇರಿ ಆಗಮಿಸಿದ್ದರು. ಎಎಪಿ ಸರ್ಕಾರಕ್ಕೆ 100 ಕೋಟಿ ರೂಪಾಯಿ ಲಂಚ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ, ಇಡಿ ವಶದಲ್ಲಿರುವ ಸೌತ್ ಗ್ರೂಪ್ ನ ಅರುಣ್ ರಾಮಚಂದ್ರ ಪಿಳ್ಳೆ ಅವರ ಸಮ್ಮುಖದಲ್ಲೇ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

'ಸೌತ್ ಗ್ರೂಪ್' ಎಂಬುದು ಕವಿತಾ, ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ ರೆಡ್ಡಿ, ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮತ್ತು ಇತರರೊಂದಿಗೆ ಸಂಪರ್ಕ ಹೊಂದಿದ ಮದ್ಯದ ಕಾರ್ಟೆಲ್ ಆಗಿದೆ. ಪಿಳ್ಳೈ ಅವರು ಕವಿತಾ ಅವರ ಬೇನಾಮಿ ಹೂಡಿಕೆಗಳನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT