ರಜನಿ ಪಾಟೀಲ್ 
ದೇಶ

ರಾಜ್ಯಸಭೆ ಕಾಂಗ್ರೆಸ್‌ ಉಪ ನಾಯಕರಾಗಿ ಪ್ರಮೋದ್ ತಿವಾರಿ, ಸಚೇತಕರಾಗಿ ರಜನಿ ನೇಮಕ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕರಾಗಿ ಪ್ರಮೋದ್ ತಿವಾರಿ ಮತ್ತು ಪಕ್ಷದ ಸಚೇತಕರಾಗಿ ರಜನಿ ಪಾಟೀಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ.

ನವದೆಹಲಿ: ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕರಾಗಿ ಪ್ರಮೋದ್ ತಿವಾರಿ ಮತ್ತು ಪಕ್ಷದ ಸಚೇತಕರಾಗಿ ರಜನಿ ಪಾಟೀಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ.
  
ಆನಂದ್ ಶರ್ಮಾ ಅವರ ನಿವೃತ್ತಿ ಮತ್ತು ರಾಜೀವ್ ಸತವ್ ಅವರ ನಿಧನದ ನಂತರ ಖಾಲಿಯಾದ ಸ್ಥಾನಗಳಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಇಬ್ಬರು ನಾಯಕರನ್ನು ನೇಮಕ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನೇಮಕಾತಿಯ ಕುರಿತು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿರುವ ತಿವಾರಿ ಅವರು ಈ ಹಿಂದೆ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಂಸದರಾಗಿದ್ದಾರೆ.

ರಜನಿ ಪಾಟೀಲ್ ಅವರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದು, ಪ್ರಸ್ತುತ ಅಶಿಸ್ತಿನ ವರ್ತನೆಗಾಗಿ ಬಜೆಟ್ ಅಧಿವೇಶನದಿಂದ ಅಮಾನತುಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT