ಸಿಎಂ ಎಂಕೆ ಸ್ಟಾಲಿನ್ 
ದೇಶ

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ವಿರೋಧಿಸದಂತೆ ಡಿಎಂಕೆಗೆ ಸೂಚಿಸಿದ್ದರು: ಎಂಕೆ ಸ್ಟಾಲಿನ್

ತುರ್ತು ಪರಿಸ್ಥಿತಿಯನ್ನು ವಿರೋಧಿಸಬೇಡಿ ಎಂದು ಇಂದಿರಾ ಗಾಂಧಿ ಅವರು ಡಿಎಂಕೆಗೆ ಸೂಚಿಸಿದ್ದರು. ಆದರೆ ಅಂದಿನ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ ಅವರು ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ಅದನ್ನು ವಿರೋಧಿಸಿ...

ಕೊಯಮತ್ತೂರು: ತುರ್ತು ಪರಿಸ್ಥಿತಿಯನ್ನು ವಿರೋಧಿಸಬೇಡಿ ಎಂದು ಇಂದಿರಾ ಗಾಂಧಿ ಅವರು ಡಿಎಂಕೆಗೆ ಸೂಚಿಸಿದ್ದರು. ಆದರೆ ಅಂದಿನ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ ಅವರು ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ಅದನ್ನು ವಿರೋಧಿಸಿ ತಮ್ಮ ಸರ್ಕಾರ ಕಳೆದುಕೊಂಡರು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ಹೇಳಿದ್ದಾರೆ.

ಇಂದು ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಸ್ಟಾಲಿನ್, 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಅದನ್ನು ವಿರೋಧಿಸಬಾರದು ಎಂದಿದ್ದ ಇಂದಿರಾ ಗಾಂಧಿ, ತಮ್ಮ ಮನವಿಗೆ ಕಿವಿಗೊಡದಿದ್ದರೆ ಡಿಎಂಕೆ ಸರ್ಕಾರ ವಜಾಗೊಳಿಸುವುದಾಗಿ ಕರುಣಾನಿಧಿ ಅವರಿಗೆ ಎಚ್ಚರಿಕೆ ನೀಡಿದ್ದರು ಎಂದು ಸ್ಟಾಲಿನ್ ಹೇಳಿದ್ದಾರೆ. 

"ಇಂದಿರಾ ಗಾಂಧಿ ಅವರು ಬಿಕ್ಕಟ್ಟಿನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು" ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದರು. ಅದರ ನಂತರ ಹಲವಾರು ವ್ಯಕ್ತಿಗಳನ್ನು ಬಂಧಿಸಲಾಯಿತು.

"ನಾವು ಆಗ ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿದ್ದೆವು. ಆ ಸಮಯದಲ್ಲಿ, ಕರುಣಾನಿಧಿ ಅವರಿಗೆ ದೆಹಲಿಯಿಂದ ಒಂದು ಸಂದೇಶ ಬಂದಿತ್ತು. ಮೇಡಂ ಇಂದಿರಾ ಗಾಂಧಿ ಅವರು ನಿಯೋಜಿಸಿದ ಸಂದೇಶವಾಹಕರು, ನೀವು ತುರ್ತು ಪರಿಸ್ಥಿತಿಯನ್ನು ವಿರೋಧಿಸಬಾರದು ಮತ್ತು ವಿರೋಧಿಸಿದರೆ ಡಿಎಂಕೆ ಸರ್ಕಾರ ಪತನವಾಗಲಿದೆ ಎಂದರು ಎಚ್ಚರಿಕೆ ನೀಡಿದ್ದರು ಎಂದರು.

ಆದರೆ, ಕರುಣಾನಿಧಿ ಅವರು ನನಗೆ ನನ್ನ ಜೀವನದ ಬಗ್ಗೆಯೂ ಚಿಂತೆ ಇಲ್ಲ. ನನಗೆ ಪ್ರಜಾಪ್ರಭುತ್ವ ಮುಖ್ಯ ಎಂದು ಹೇಳಿದ್ದರು. ನಂತರ ಇಲ್ಲಿನ ಮರೀನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕರುಣಾನಿಧಿ ಅವರು ತುರ್ತು ಪರಿಸ್ಥಿತಿ ವಿರುದ್ಧ ನಿರ್ಣಯ ಅಂಗೀಕರಿಸಿದ್ದರು ಎಂದು ಸ್ಟಾಲಿನ್ ನೆನಪಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT