ಪ್ರಾತಿನಿಧಿಕ ಚಿತ್ರ 
ದೇಶ

ತಿರುವನಂತಪುರಂನಲ್ಲಿ 'ಕಿಡ್ನಿ, ಲಿವರ್ ಮಾರಾಟಕ್ಕಿದೆ' ಎಂಬ ಪೋಸ್ಟರ್; ಜನರಲ್ಲಿ ಆತಂಕ ಸೃಷ್ಟಿ!

ಜಾಹೀರಾತಿನ ಜೊತೆಗೆ ಎರಡು ಫೋನ್ ನಂಬರ್‌ಗಳನ್ನು ಸಹ ನೀಡಲಾಗಿದೆ. ಸಂಖ್ಯೆಗಳನ್ನು ಡಯಲ್ ಮಾಡಿದಾಗ, ಅವು ಅಸಲಿ ಎಂದು ಕಂಡುಬಂದಿದೆ. ಮಣಕೌಡ್ ಪುಥೇನ್ ರಸ್ತೆಯ ಸಂತೋಷ್ ಕುಮಾರ್ (50) ಎಂಬಾತನೇ ಈ ಬೋರ್ಡ್ ಹಾಕಿದ್ದ.

ತಿರುವನಂತಪುರಂ: 'ಕಿಡ್ನಿ, ಲಿವರ್ ಮಾರಾಟಕ್ಕಿದೆ', ಇದು ತಿರುವನಂತಪುರದ ಮಣಕೌಡ್ ಎಂಬಲ್ಲಿನ ಮನೆಯೊಂದರ ಮುಂದೆ ಕಾಣಿಸಿಕೊಂಡ ಪೋಸ್ಟರ್. ಮೊದಲಿಗೆ ಇದು ಯಾರೋ ಮಾಡಿದ ಚೇಷ್ಟೆ ಅಥವಾ ಸರ್ಕಾರವನ್ನು ಟ್ರೋಲ್ ಮಾಡಲು ಮಾಡಿದ್ದು ಎಂದೇ ಆರಂಭದಲ್ಲಿ ಜನರು ಭಾವಿಸುವಂತೆ ಮಾಡಿತು.

ಜಾಹೀರಾತಿನ ಜೊತೆಗೆ ಎರಡು ಫೋನ್ ನಂಬರ್‌ಗಳನ್ನು ಸಹ ನೀಡಲಾಗಿದೆ. ಸಂಖ್ಯೆಗಳನ್ನು ಡಯಲ್ ಮಾಡಿದಾಗ, ಅವು ಅಸಲಿ ಎಂದು ಕಂಡುಬಂದಿದೆ. ಮಣಕೌಡ್ ಪುಥೇನ್ ರಸ್ತೆಯ ಸಂತೋಷ್ ಕುಮಾರ್ (50) ಎಂಬಾತನೇ ಈ ಬೋರ್ಡ್ ಹಾಕಿದ್ದ.

ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಗೋಣಿಚೀಲ ಎತ್ತುವ ವೇಳೆ ಅಪಘಾತ ಸಂಭವಿಸಿದೆ ಎಂದು ಸಂತೋಷ್ ತಿಳಿಸಿದ್ದಾರೆ.

ಚಿಕಿತ್ಸೆಗೆ ಒಳಗಾಗಬೇಕಾಗಿದ್ದ ಅವರ ಬಳಿ ಈಗ ಹಣವಿಲ್ಲ. ಮಣಕೌಡ್ ಜಂಕ್ಷನ್‌ನಲ್ಲಿರುವ ಕುಟುಂಬದ ಭೂಮಿಯ ಒಂದು ಭಾಗವನ್ನು ಮಾರಾಟ ಮಾಡಲು ಅವರು ಬಯಸಿದ್ದರು. ಆದರೆ, ಜಮೀನಿನ ವಿಚಾರವಾಗಿ ಸಹೋದರನ ಜತೆ ಜಗಳವಾಗಿತ್ತು.
ಆಸ್ತಿ ಅವರ ತಾಯಿಯ ಹೆಸರಿನಲ್ಲಿದೆ ಮತ್ತು ಈಗ ಸಂತೋಷ್ ಸೇರಿದಂತೆ ಆರು ಸಹೋದರರ ಹೆಸರಿನಲ್ಲಿದೆ ಎಂದು ಅವರ ಸಹೋದರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ತನ್ನ ಪತ್ನಿ ಕೆಲವು ಟ್ಯೂಷನ್ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು. ಆದರೆ, ಕೋವಿಡ್-19 ನಂತರ ಅದೂ ನಿಂತುಹೋಯಿತು ಎನ್ನುತ್ತಾರೆ ಸಂತೋಷ್.

ಅಂತಹ ಕಠಿಣ ಪರಿಸ್ಥಿತಿಯಲ್ಲಿ, ತಮ್ಮ ಪ್ರಮುಖ ಅಂಗಗಳನ್ನು ಮಾರಾಟ ಮಾಡುವುದನ್ನು ಬಿಟ್ಟು ಬೇರೆ ಯಾವುದೇ ಮಾರ್ಗವಿಲ್ಲ ಎಂದು ಕುಟುಂಬ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT